Month: February 2026

ತಿಪ್ಪೆಗೆ ಬಿಸಾಕಿದ ಔಷಧಿಗಳು ಆರೋಗ್ಯ ಇಲಾಖೆಗೆ ಸಂಬಂಧಿಸಿಲ್ಲ: ಡಿಎಚ್‌ಒ ಡಾ.ಸುರೇಂದ್ರ ಬಾಬು

ರಾಯಚೂರು ಫೆಬ್ರವರಿ 27 (ಕರ್ನಾಟಕ ವಾರ್ತೆ): ಇತ್ತೀಚಿಗೆ ನಗರದ ಚಂದ್ರಬಂಡ ರಸ್ತೆಯ ಜಲಾಲ್‌ನಗರ ಬಡಾವಣೆ ಬಳಿಯ ತಿಪ್ಪೆಯಲ್ಲಿ ಪತ್ತೆಯಾದ ಔಷಧಿಗಳು ಕುರಿತು ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳಲ್ಲಿ ರಾಯಚೂರಲ್ಲಿ ಅವಧಿ ಇರುವ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳು ತಿಪ್ಪೆಗೆ ಬಿಸಾಕಿದ ಸರ್ಕಾರಿ…

ಛಲವಾದಿ ಮಹಾಸಭಾದಿಂದ ಒಳಮೀಸಲಾತಿ ರಹಿತ ಹಳೆಯ ಮೀಸಲಾತಿ ಪದ್ದತಿ ಮರುಜಾರಿಗೆ ಆಗ್ರಹ!

ಒಳ ಮೀಸಲಾತಿ ರಹಿತ ಹಳೆಯ ಮೀಸಲಾತಿ ಪದ್ದತಿಯನ್ನು ಮರು ಜಾರಿಗೆ ತಂದು ನೇಮಕಾತಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ತೊಂದರೆಯಾಗದಂತೆ ಸೂಕ್ತ ಆದೇಶ ಹೊರಡಿಸಬೇಕು, ಒಳ ಮೀಸಲಾತಿ ಜಾರಿಗೆ ತಂದ ನಂತರ ಅನೇಕ ಆಡಳಿತಾತ್ಮಕ ಕಾನೂನು ಮತ್ತು ಸಾಮಾಜಿಕ ಗೊಂದಲಗಳು ಉಂಟಾಗಿವೆ ಎಂದು…

ತ್ರಿಚಕ್ರ ವಾಹನವನ್ನು ವಿತರಣೆ

ರಾಯಚೂರು ಫೆಬ್ರವರಿ 27 (ಕರ್ನಾಟಕ ವಾರ್ತೆ): ಕಾರ್ಮಿಕ ಇಲಾಖೆಯ ವತಿಯಿಂದ ವಿವಿಧ ಕಂಪನಿಗಳು, ಕೈಗಾರಿಕೆಗಳು ಹಾಗೂ ಇತರೇ ವಾಣಿಜ್ಯ ಸಂಸ್ಥೆಗಳ ಪ್ರಾಯೋಜಕತ್ವದ ಮತ್ತು ಸಹಯೊಗದೊಂದಿಗೆ ಕಾರ್ಮಿಕ ಸಚಿವರು ಸಂತೋಷ ಲಾಡ್ ಅವರು ಫೆ.27ರಂದು ರಾಜ್ಯದಾದ್ಯಂತ ಅರ್ಹ ವಿಕಲಚೇತನರಿಗೆ ಮೋಟಾರ್ ಸಹಿತ ತ್ರಿಚಕ್ರ…

ಸಮಾಜ ಸೇವಕ ಹಜೇರಿಗೆ ಗೌರವ ಸಮರ್ಪಣೆ

ತಾಳಿಕೋಟಿ: ಪಟ್ಟಣದ ವಿ.ಕೆ.ಹೆಚ್.ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ,ಸಮಾಜ ಸೇವಕ ಪ್ರಹ್ಲಾದ ಹಜೇರಿ ಇವರನ್ನು ನಾವದಗಿ ಗ್ರಾಮ ಬ್ರಹನ್ಮಠದ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಸಲ್ಲಿಸಲಾಯಿತು. ನಾವದಗಿ ಗ್ರಾಮದ ಬ್ರಹನ್ಮಠದಲ್ಲಿ ಪೂಜ್ಯ ಷ.ಬ್ರ.ಶ್ರೀ ರಾಜ ಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಮಹಾಸ್ವಾಮಿಗಳವರ ದ್ವಿತೀಯ…

ನೀರಿನ ಸೌಕರ್ಯ ಒದಗಿಸುವಂತೆ ಶಾಸಕರಿಗೆ ಮನವಿ

ತಾಳಿಕೋಟಿ: ಪಟ್ಟಣದ ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ವಿಪಿಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನೀರಿನ ಸಮಸ್ಯೆ ಇದ್ದು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಆದಷ್ಟು ಬೇಗ ನೀರು ಒದಗಿಸಲು ಕ್ರಮ ವಹಿಸುವಂತೆ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರ ನಿಯೋಗ…

ಫೆ.15ರಂದು ಶ್ರೀ ಹೊಳೆ ಹುಚ್ಚೇಶ್ವರ ಜಾತ್ರೆ ಹಾಗೂ “ನೀರಲಗಿ ಉತ್ಸವ-2026”

ತಾಳಿಕೋಟಿ: ತಾಲೂಕಿನ ನೀರಲಗಿ ಗ್ರಾಮದಲ್ಲಿ ಇದೇ ಫೆಬ್ರವರಿ 15 ರಂದು ಶ್ರೀ ಹೊಳೆ ಹುಚ್ಚೇಶ್ವರ ಮೂರ್ತಿ ಪ್ರತಿಷ್ಠಾಪನೆಯ ಜಾತ್ರಾ ಮಹೋತ್ಸವ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು , ಮೊದಲನೇಯದಾಗಿ ಪುರಾಣ ಪ್ರವಚನ ಕಾರ್ಯಕ್ರಮವನ್ನು ಶ್ರೀ ಹುಚ್ಚೇಶ್ವರ ಸಂಸ್ಥಾನ…

ಮಸ್ಕಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ, ಸಾರ್ವಜನಿಕರಿಗೆ ಸಿಹಿ ಹಂಚಿ ಹುಟ್ಟುಹಬ್ಬ ಆಚರಣೆ ಯಡಿಯೂರಪ್ಪನವರು ದೀನ ದಲಿತರ ಹಿಂದುಳಿದ ವರ್ಗದ ಆಶಾಕಿರಣ – ಮಾಜಿ ಶಾಸಕ ಪ್ರತಾಪಗೌಡ ಪಾಟೀಲ

ಮಸ್ಕಿ : ಪಟ್ಟಣದಲ್ಲಿ ಬಿಜೆಪಿ ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹುಟ್ಟುಹಬ್ಬವನ್ನು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರು ಇಲ್ಲಿನ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಿ ಹಾಗೂ ಮಸ್ಕಿ ಹಳೆ ಬಸ್ ನಿಲ್ದಾಣದಲ್ಲಿ ವ್ಯಾಪಾರಿಗಳಿಗೆ ಮತ್ತು ಸಾರ್ವಜನಿಕರಿಗೆ…

ಸೋಮಲಾಪುರದಲ್ಲಿ 40 ವರ್ಷಗಳಿಂದ 80 ಬಡ ಕುಟುಂಬಗಳು ವಾಸ ಪ್ರಭಾವಿ ವ್ಯಕ್ತಿಗಳಿಂದ ಜೀವ ಬೆದರಿಕೆ, ಬಡವರನ್ನ ಒಕ್ಕಲೆಬ್ಬಿಸುವ ಕುತಂತ್ರ!

ಸಿಂಧನೂರು ತಾಲೂಕಿನ ಸಾಲಗುಂದ ಹೋಬಳಿಯ ಸೋಮಲಾಪುರ ಗ್ರಾಮದಲ್ಲಿ ಸರ್ವೆ ನಂ-197|1 ಮತ್ತು 198|2 ರಲ್ಲಿ ಈಗಾಗಲೇ ಸುಮಾರು 40 ವರ್ಷಗಳಿಂದ ವಾಸ ಮಾಡುತ್ತಿರುವ ಎಲ್ಲಾ ಸಮುದಾಯದ 80ಕ್ಕೂ ಹೆಚ್ಚು ಬಡ ಕುಟುಂಬಗಳನ್ನು ಒಕ್ಕಲೆಬ್ಬಿಸುವಂತಹ ತಂತ್ರಗಾರಿಕೆ ನಡೆಯುತ್ತಿದೆ ಎಂದು ಸೋಮಲಾಪುರ ನಿವಾಸಿಗರು ಆರೋಪ…

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎನ್ ಎಸ್ ಎಸ್ ಶಿಭಿರಾರ್ಥಿಗಳು ಪಾತ್ರ ಮಹತ್ತರವಾದದ್ದು— ತಹಸಿಲ್ದಾರ್ ಅರುಣಕುಮಾರ ದೇಸಾಯಿ

ಸಿಂಧನೂರು ತಾಲೂಕಿನ ಅಂಬಾಮಠದಲ್ಲಿ ನಡೆದ ನೊಬಲ್ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಧ್ವಜಾರೋಹಣ ಮಾತನಾಡಿದ ಅವರು ಶ್ರಮವಿಲ್ಲದ ಎಲ್ಲವೂ ಸಿಗಬೇಕು ಎನ್ನುವಂತಹ ಕಾಲದಲ್ಲಿ ನಾವಿದ್ದೀವಿ. ಆದರೆ ಅದಕ್ಕೆ ಸಿಗುವಂತಹ ಫಲ ಕ್ಷಣಿಕವಾದದ್ದು, ಅದರಿಂದ ಈ…

ಕಲಾಕೃತಿಯಲ್ಲಿ ಮಣ್ಣಿನ ಮಡಿಕೆಗಳನ್ನು ಅಲಂಕಾರಗೊಳಿಸಿ ಕಾಳು ಮತ್ತು ನೀರು ಹಾಕಿ ಗಿಡಮರಗಳಿಗೆ ಕಟ್ಟಿ ಪ್ರಾಣಿ ಪಕ್ಷಿಗಳಿಗೆ ಮಾನವೀಯತೆ ತೋರುತ್ತಿರುವ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ…. ರಾಜ್ಯ ಪ್ರಶಸ್ತಿ ಪುರಸ್ಕೃತ ವನಸಿರಿ ಅಮರೇಗೌಡ ಮಲ್ಲಾಪುರ ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳೇ ಮಡಿಕೆಗಳಿಗೆ ಕಲಾಕೃತಿಗಳನ್ನು ಬಿಡಿಸುವ ಮೂಲಕ ಅಲಂಕಾರಗೊಳಿಸಿ ಶಾಲೆಯಲ್ಲಿರುವ ಎಲ್ಲಾ ಗಿಡಗಳಿಗೆ ಮಡಿಕೆಗಳನ್ನು ಕಟ್ಟಿ ಕಾಳು ಮತ್ತು ನೀರು ಹಾಕಿ ಪ್ರಾಣಿ ಪಕ್ಷಿಗಳಿಗೆ ಬಿಸಿಲು ಮತ್ತು ನೀರಿನ ದಾಹ ತೀರಿಸಲು ಮುಂದಾಗಿರುವುದು ಎಲ್ಲ ಪರಿಸರ ಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾದರು. ಇದೇ ಸಂಧರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಪೌಂಡೇಷನ್ ರಾಜ್ಯಾಧ್ಯಕ್ಷ ಅಮರೇಗೌಡ ಮಲ್ಲಾಪುರ ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಮಲ್ಲಾಪುರ ಶಾಲೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಕೈಗೊಳ್ಳಲಾಗಿದೆ. ಇಲ್ಲಿನ ಶಾಲೆಯ ಶಿಕ್ಷಕರು,ವಿದ್ಯಾರ್ಥಿಗಳು ಬೇಸಿಗೆ ಕಾಲ ಆರಂಭವಾಗಿರುವುದರಿಂದ ಪ್ರಾಣಿ ಪಕ್ಷಿಗಳ ಸಂತತಿ ಉಳುವಿಗಾಗಿ ಸ್ವತಃ ತಾವೇ ಮಣ್ಣಿನ ಮಡಿಕೆಗಳಿಗೆ ಕಲಾಕೃತಿ ಮೂಲಕ ಅಲಂಕಾರಗೊಳಿಸಿ ಗಿಡಮರಗಳಿಗೆ ಕಟ್ಟಿ ಕಾಳು ಮತ್ತು ನೀರು ಹಾಕಿ ಮಾನವೀಯತೆ ತೋರುತ್ತಿರುವ ಕಾರ್ಯ ಶ್ಲಾಘನೀಯ.ಇದೇ ರೀತಿ ಪ್ರತಿಯೊಬ್ಬರೂ ತಮ್ಮ ಶಾಲೆ,ಮನೆ ಮಹಡಿಗಳ ಮೇಲೆ ಹಾಗೂ ಸುತ್ತಮುತ್ತ ಇರುವ ಗಿಡಗಳ ರಂಬೆ ಕೊಂಬೆಗಳಿಗೆ ಮಣ್ಣಿನ ಮಡಿಕೆಗಳನ್ನು ಕಟ್ಟಿ ಕಾಳು ನೀರು ಹಾಕಿ ಪ್ರಾಣಿ ಪಕ್ಷಿಗಳ ಸಂಕುಲ ಉಳಿಸಲು ಮುಂದಾಗಬೇಕು ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ಷಣ್ಮುಖಗೌಡ CRP ಸಮೂಹ ಸಂಪನ್ಮೂಲ ಕೇಂದ್ರ ಪಗಡದಿನ್ನಿ,ಸಂಗಪ್ಪ ಮುಖ್ಯ ಗುರುಗಳು,ಶಿಕ್ಷಕರಾದ ಅಮರೇಶ, ವನಸಿರಿ ಪೌಂಡೇಷನ್ ರಾಜ್ಯ ಸಾಮಾಜಿಕ ಜಾಲತಾಣ ಅಧ್ಯಕ್ಷ ಚನ್ನಪ್ಪ ಕೆ.ಹೊಸಹಳ್ಳಿ,ಶ್ರೀಮತಿ ಅನುಸೂಯ ಶ್ರೀಮತಿ ಅಂಬಮ್ಮ ಶ್ರೀಮತಿ ಸುಗಮ್ಮ ಹಾಗೂ ವಿದ್ಯಾರ್ಥಿಗಳು ಇದ್ದರು .

ಕಲಾಕೃತಿಯಲ್ಲಿ ಮಣ್ಣಿನ ಮಡಿಕೆಗಳನ್ನು ಅಲಂಕಾರಗೊಳಿಸಿ ಕಾಳು ಮತ್ತು ನೀರು ಹಾಕಿ ಗಿಡಮರಗಳಿಗೆ ಕಟ್ಟಿ ಪ್ರಾಣಿ ಪಕ್ಷಿಗಳಿಗೆ ಮಾನವೀಯತೆ ತೋರುತ್ತಿರುವ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ…. ರಾಜ್ಯ ಪ್ರಶಸ್ತಿ ಪುರಸ್ಕೃತ ವನಸಿರಿ ಅಮರೇಗೌಡ ಮಲ್ಲಾಪುರ ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದ ಉನ್ನತಿಕರಿಸಿದ ಸರಕಾರಿ ಹಿರಿಯ…