ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನ ಜೆಸ್ಕಾಂ ಉಪ ವಿಭಾಗಳ ಗ್ರಾಹಕರ ಕುಂದು ಕೊರೆತೆ ತ್ರೈಮಾಸಿಕ ಸಭೆಯನ್ನು ಅಧೀಕ್ಷಕ ಅಭಿಯಂತರರು(ವಿ) ರಾಯಚೂರು ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 6ರ ಬೆಳಿಗ್ಗೆ 10ಗಂಟೆಗೆ ರಾಯಚೂರು ಗ್ರಾಮೀಣ ಉಪ ವಿಭಾಗ, ಏಪ್ರಿಲ್ 7ರ ಬೆಳಿಗ್ಗೆ 10ಗಂಟೆಗೆ ದೇವದುರ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಾಜರಾಗಿ ತಮ್ಮ ಕುಂದು ಕೊರತೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ ಎಂದು ಜೆಸ್ಕಾಂ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
