ತಾಳಿಕೋಟಿ: ಪಟ್ಟಣದ ಪ್ರತಿಷ್ಠಿತ ವಿವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಎಸ್ ಕೆ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಕಿಶೋರಕುಮಾರ ಇವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗುರುವಾರ ಎನ್ಎಸ್ಎಸ್ ವಿಭಾಗದಿಂದ ಆಶ್ರಯ ಕಾಲೋನಿಯಲ್ಲಿ ಹಮ್ಮಿಕೊಂಡ ವಿಶೇಷ ತರಬೇತಿ ಶಿಬಿರದಲ್ಲಿ ಅವರಿಗೆ ಈ ಸನ್ಮಾನ ನೀಡಲಾಯಿತು.ವಿ.ವಿ.ಸಂಘದ ಅಧ್ಯಕ್ಷ ವಿ.ಸಿ.ಹಿರೇಮಠ, ಎಸ್‌ಕೆ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷ ಕಾಶಿನಾಥ ಮುರಾಳ, ಸಂಘದ ಕಾರ್ಯದರ್ಶಿ ಎಂ ಎಸ್ ಸರಶಟ್ಟಿ, ನಿರ್ದೇಶಕ ಕಾಶಿನಾಥ ಸಜ್ಜನ, ಪ್ರಾಚಾರ್ಯ ಆರ್ ಎಂ ಬಂಟನೂರ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಎ.ಎ. ಗಂಗನಗೌಡರ ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *