ಹಾಲಾಪೂರ: ಇಂದು ದೇಶಾದ್ಯಂತ ಬಹಳಷ್ಟು ಪ್ರಚಲಿತ ವಿಷಯವಾಗಿ ಎಲ್ಲರಲ್ಲೂ ಚರ್ಚೆಗೆ ಗ್ರಾಸವಾದದ್ದು SIR ಎಂಬದು,
ಚುನಾವಣಾ ಆಯೋಗ ವತಿಯಿಂದ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಮತ್ತು ಶುದ್ದಿಕರಿಸಲು ಕೈಗೊಂಡಿರುವ ಪ್ರಕ್ರಿಯೆ SIR ( Special Intensive Revision) ವಿಶೇಷ ಸಮಗ್ರ ಪರಿಷ್ಕರಣೆ ಇದರ ಮುಖ್ಯ ಉದ್ದೇಶವಾಗಿ ಇಂದು ಹಾಲಾಪೂರದ ನಾಡ ಕಛೇರಿ, ಗ್ರಾಮ ಪಂಚಾಯತಿ, ಶಾಲಾ ಶಿಕ್ಷಕರು ಮಕ್ಕಳಿಂದ ಪ್ರಮುಖ ಬೀದಿಗಳಲ್ಲಿ ಮತದಾರರಿಗೆ ಜಾಗೃತಿ ಜಾಥಾ ಮಾಡಲಾಯಿತು. ನಂತರ ಮುಖ್ಯ ಶಿಕ್ಷಕ ಮಂಜುನಾಥ ಹಾಲಾಪೂರ ಮಾತನಾಡಿ ಚುನಾವಣಾ ಆಯೋಗ ವಿಶೇಷ ಶೀರ್ಷಿಕೆಯ ಅಡಿಯಲ್ಲಿ ಜಾರಿಗೆ ತಂದಿರುವ ಪ್ರಕ್ರಿಯೆಯೇ “ವಿಶೇಷ ಸಮಗ್ರ ಪರಿಷ್ಕರಣೆ SIR” ಎಂಬ ಮತದಾರರ ಪಟ್ಟಿ ಶುದ್ದಿಕರಿಸುವುದು,ಬೂತ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಬೇಟಿ ನೀಡಿ ನಿಖರ ಮಾಹಿತಿ ಸಂಗ್ರಹ ಮಾಡಲು ಬಂದಾಗ ಸರಿಯಾಗಿ ಮಾಹಿತಿ ಕೊಟ್ಟು ಸಹಕರಿಸಬೇಕು ಇದಕ್ಕೆ ಎಲ್ಲರ ಅವಶ್ಯಕತೆ ಇದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾದಿಕಾರಿ ಕೃಷ್ಣಪ್ಪ , ಗ್ರೇಡ್ ಒನ್ ಸೆಕ್ರೆಟರಿ ರಮೇಶ , ಪರಮಣ್ಣ, ಗ್ರಂಥಪಾಲಕ ಗ್ಯಾನಪ್ಪ ದೊಡ್ಡಮನಿ ಹಾಗೂ ಶಿಕ್ಷಕ ಶಿಕ್ಷಕಿಯರು ಇದ್ದರು.

Leave a Reply

Your email address will not be published. Required fields are marked *

You missed

ಭಜನೆಗೆ ಸಕಾರಾತ್ಮಕ ಮನೋಭಾವ ವೃದ್ಧಿ : ವಾಗೀಶಾಚಾರ್ ಬಳ್ಳಾರಿ / ಕಂಪ್ಲಿ : ಅಧಿಕ ಮಾಸದಲ್ಲಿ ಭಗವಂತನ ಭಜನೆ ಮಾಡುವುದರಿಂದ ಸಕಾರಾತ್ಮಕ ಮನೋಭಾವನೆಯನ್ನು ವೃದ್ಧಿಗೊಳಿಸುತ್ತದೆ ಎಂದು ಗಂಗಾವತಿಯ ವಿಜಯಧ್ವಜ ವಿದ್ಯಾಪೀಠದ ಪ್ರಾಧ್ಯಾಪಕ ಪಂಡಿತ್ ವಾಗೀಶಾಚಾರ್ ಗೋರೆಬಾಳ ಹೇಳಿದರು. ಕಂಪ್ಲಿ-ಕೋಟೆಯ ಶ್ರೀಪಟ್ಟಾಭಿರಾಮಚಂದ್ರದೇವರ ದೇವಸ್ಥಾನದಲ್ಲಿ ಅಧಿಕ ಮಾಸದ ಮಂಗಳೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಭಜನಾ ಸಮಾರೋಪಕ್ಕೆ ಚಾಲನೆಯೊಂದಿಗೆ ಅಧಿಕ ಮಾಸ ಮಹಾತ್ಮೆ ಕುರಿತು ಉಪನ್ಯಾಸ ನೀಡಿ, ದಾನ ಧರ್ಮ ಪುಣ್ಯ ಪರೋಪಕಾರ್ಯಗಳನ್ನು ಮಕ್ಕಳಿಗೆ ಹೇಳಿಕೊಡುವ ಅಗತ್ಯವಿದೆ. ಮನಸ್ಸನ್ನು ಭಗವಂತನದಲ್ಲಿ ಸ್ಥಿರವಾಗಿ ನಿಲ್ಲಿಸಲು ನಿತ್ಯ ಜಪ ತಪ, ಭಜನೆ, ಆರಾಧನೆಯಲ್ಲಿ ತೊಡಗಿಕೊಳ್ಳಬೇಕು ಎಂದರು. ಕೋಟೆಯ ಶ್ರೀರಾಮ ಮಹಿಳಾ ಭಜನಾ ಮಂಡಳಿಯಿಂದ ಕಳೆದ 30ದಿನಗಳಿಂದ ಬ್ರಾಹ್ಮಣ ಸುವಾಸಿನಿಯರು ಹಮ್ಮಿಕೊಂಡಿದ್ದ ಭಜನೆಯನ್ನು ಮಂಗಳಗೊಳಿಸಲಾಯಿತು. ಈ ನಿಮಿತ್ತ ಶ್ರೀರಾಮದೇವರು, ಲಕ್ಷ್ಮಿ ನರಸಿಂಹ, ಪ್ರಾಣದೇವರು, ರುದ್ರದೇವರು, ರಾಯರ ಮೃತ್ತಿಕಾ ವೃಂದಾವನಗಳಿಗೆ ಸುಪ್ರಭಾತ, ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಸೇವೆ ಸಲ್ಲಿಸಲಾಯಿತು. ಶ್ರೀರಾಮ ಮಹಿಳಾ ಭಜನಾ ಮಂಡಳಿಯ ಪ್ರಮುಖರಾದ ಸಾವಿತ್ರಿಬಾಯಿ ಜೋಷಿ, ರಮಾ ಪುರೋಹಿತ್, ವೇದಾ ಜೋಷಿ, ಚಂದ್ರಿಕಾ ಸಗರದ, ರಾಧಿಕ ಜೋಷಿ, ಜ್ಯೋತಿ ಗುಡಿ, ವಾಣಿ ಜೋಷಿ, ಲತಾ ರಾಮಾಯಣ, ರಚನಾ ಜೋಷಿ, ಸುಧಾ ವೈದ್ಯ, ಐಶ್ವರ್ಯ ಜೋಷಿ, ವರ್ಷಾವಿಕ್ರಮ್ ಸೇರಿದಂತೆ ಸದ್ಭಕ್ತರು ಪಾಲ್ಗೊಂಡಿದ್ದರು.