ಬಳ್ಳಾರಿ / ಕಂಪ್ಲಿ : ಭಾರತೀಯ ಜನತಾ ಪಾರ್ಟಿಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಕಂಪ್ಲಿ ಮಂಡಲದ ಓ.ಬಿ.ಸಿ. ಮೋರ್ಚಾದ ನೂತನ ಅಧ್ಯಕ್ಷರಾಗಿ ಬಂಡಿ ಜಡೆಪ್ಪ ನೇಮಕಗೊಂಡಿದ್ದಾರೆ.
ಬಿಜೆಪಿ ಪಕ್ಷದ ಸಂಘಟನೆಯನ್ನು ಸದೃಢವಾಗಿ ಮತ್ತು ಅತ್ಯಂತ ಬಲಿಷ್ಠವಾಗಿ ಕಟ್ಟಲು ನಿಮ್ಮ ಪರಿಶ್ರಮ ಅತ್ಯವಶ್ಯವಾಗಿದೆ. ಸಂಪೂರ್ಣ ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಶಿಸ್ತು ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಅವುಗಳನ್ನು ಅಳವಡಿಸಿಕೊಂಡು ಮುಂದಿನ ವರ್ಷದ ಅವಧಿಯಲ್ಲಿ ಪಕ್ಷದ ಸಂಘಟಣೆಯತ್ತ ಹೆಚ್ಚಿನ ಗಮನಹರಿಸಿ ಕಾರ್ಯಕರ್ತರಿಗೆ, ಸ್ಫೂರ್ತಿಯಾಗಿ, ಶಕ್ತಿಯಾಗಿ, ರಾಜಕೀಯವಾಗಿ, ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಒಳಿತಿಗಾಗಿ ಪಕ್ಷದ ಸರ್ವತೋಮುಖ ಅಭಿವೃದ್ಧಿಗೆ ಪ್ರಮಾಣಿಕವಾಗಿ ಕೆಲಸ ನಿರ್ವಹಿಸಬೇಕೆಂದು ಆದೇಶದಲ್ಲಿ ಸೂಚಿಸಲಾಗಿದೆ.
ಇಲ್ಲಿನ ಕೊಟ್ಟಾಲ್ ರಸ್ತೆ ಬಳಿಯಲ್ಲಿರುವ ತುಂಗಭದ್ರ ಕಾರ್ಯಾಲಯದಲ್ಲಿ ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಅವರು ಆದೇಶ ಪ್ರತಿ ನೀಡಿದರು.

ನೂತನ ಅಧ್ಯಕ್ಷ ಬಂಡಿ ಜಡೆಪ್ಪ ಆದೇಶ ಪ್ರತಿ ಸ್ವೀಕರಿಸಿ ಮಾತನಾಡಿ, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಜನಾರ್ಧನ ರೆಡ್ಡಿ, ಮಾಜಿ ಶಾಸಕ ಸುರೇಶಬಾಬು, ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಹಾಗೂ ಎಲ್ಲ ಹಿರಿಯ ಬಿಜೆಪಿ ಮುಖಂಡರಿಗೂ ಅವರು ನಮ್ಮನ್ನು ಗುರುತಿಸಿ, ಕಂಪ್ಲಿ ಮಂಡಲ ಅಧ್ಯಕ್ಷರನ್ನಾಗಿ ನೇಮಕಗೊಳಿಸಿರುವುದಕ್ಕೆ ತುಂಬು ಹೃದಯದ ಕೃತಜ್ಞತೆಗಳನ್ನು ತಿಳಿಸಿದರು.

Leave a Reply

Your email address will not be published. Required fields are marked *

You missed

ಭಜನೆಗೆ ಸಕಾರಾತ್ಮಕ ಮನೋಭಾವ ವೃದ್ಧಿ : ವಾಗೀಶಾಚಾರ್ ಬಳ್ಳಾರಿ / ಕಂಪ್ಲಿ : ಅಧಿಕ ಮಾಸದಲ್ಲಿ ಭಗವಂತನ ಭಜನೆ ಮಾಡುವುದರಿಂದ ಸಕಾರಾತ್ಮಕ ಮನೋಭಾವನೆಯನ್ನು ವೃದ್ಧಿಗೊಳಿಸುತ್ತದೆ ಎಂದು ಗಂಗಾವತಿಯ ವಿಜಯಧ್ವಜ ವಿದ್ಯಾಪೀಠದ ಪ್ರಾಧ್ಯಾಪಕ ಪಂಡಿತ್ ವಾಗೀಶಾಚಾರ್ ಗೋರೆಬಾಳ ಹೇಳಿದರು. ಕಂಪ್ಲಿ-ಕೋಟೆಯ ಶ್ರೀಪಟ್ಟಾಭಿರಾಮಚಂದ್ರದೇವರ ದೇವಸ್ಥಾನದಲ್ಲಿ ಅಧಿಕ ಮಾಸದ ಮಂಗಳೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಭಜನಾ ಸಮಾರೋಪಕ್ಕೆ ಚಾಲನೆಯೊಂದಿಗೆ ಅಧಿಕ ಮಾಸ ಮಹಾತ್ಮೆ ಕುರಿತು ಉಪನ್ಯಾಸ ನೀಡಿ, ದಾನ ಧರ್ಮ ಪುಣ್ಯ ಪರೋಪಕಾರ್ಯಗಳನ್ನು ಮಕ್ಕಳಿಗೆ ಹೇಳಿಕೊಡುವ ಅಗತ್ಯವಿದೆ. ಮನಸ್ಸನ್ನು ಭಗವಂತನದಲ್ಲಿ ಸ್ಥಿರವಾಗಿ ನಿಲ್ಲಿಸಲು ನಿತ್ಯ ಜಪ ತಪ, ಭಜನೆ, ಆರಾಧನೆಯಲ್ಲಿ ತೊಡಗಿಕೊಳ್ಳಬೇಕು ಎಂದರು. ಕೋಟೆಯ ಶ್ರೀರಾಮ ಮಹಿಳಾ ಭಜನಾ ಮಂಡಳಿಯಿಂದ ಕಳೆದ 30ದಿನಗಳಿಂದ ಬ್ರಾಹ್ಮಣ ಸುವಾಸಿನಿಯರು ಹಮ್ಮಿಕೊಂಡಿದ್ದ ಭಜನೆಯನ್ನು ಮಂಗಳಗೊಳಿಸಲಾಯಿತು. ಈ ನಿಮಿತ್ತ ಶ್ರೀರಾಮದೇವರು, ಲಕ್ಷ್ಮಿ ನರಸಿಂಹ, ಪ್ರಾಣದೇವರು, ರುದ್ರದೇವರು, ರಾಯರ ಮೃತ್ತಿಕಾ ವೃಂದಾವನಗಳಿಗೆ ಸುಪ್ರಭಾತ, ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಸೇವೆ ಸಲ್ಲಿಸಲಾಯಿತು. ಶ್ರೀರಾಮ ಮಹಿಳಾ ಭಜನಾ ಮಂಡಳಿಯ ಪ್ರಮುಖರಾದ ಸಾವಿತ್ರಿಬಾಯಿ ಜೋಷಿ, ರಮಾ ಪುರೋಹಿತ್, ವೇದಾ ಜೋಷಿ, ಚಂದ್ರಿಕಾ ಸಗರದ, ರಾಧಿಕ ಜೋಷಿ, ಜ್ಯೋತಿ ಗುಡಿ, ವಾಣಿ ಜೋಷಿ, ಲತಾ ರಾಮಾಯಣ, ರಚನಾ ಜೋಷಿ, ಸುಧಾ ವೈದ್ಯ, ಐಶ್ವರ್ಯ ಜೋಷಿ, ವರ್ಷಾವಿಕ್ರಮ್ ಸೇರಿದಂತೆ ಸದ್ಭಕ್ತರು ಪಾಲ್ಗೊಂಡಿದ್ದರು.