ತಾಳಿಕೋಟಿ: ಪಟ್ಟಣದ ನಿವಾಸಿ ಕರ್ನಾಟಕದ ಜನಪ್ರಿಯ ಕಾಮಿಡಿ ಕಿಲಾಡಿ ಕಾರ್ಯಕ್ರಮದ ವಿಜೇತ ಹಾಸ್ಯ ಕಲಾವಿದ ಮಹಾಂತೇಶ ಇಂಗಳಗಿ ಇವರನ್ನು ಶ್ರೀ ಮಾರುತಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ಹಾಸ್ಯ ಕಲಾವಿದ ಮಹಾಂತೇಶ ಅವರು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸಂಸ್ಥೆಯ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ನಿರ್ದೇಶಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಸನ್ಮಾನಿಸಿ ಗೌರವಿಸಿದರು.
