ಮಾನ್ವಿ: ಪಟ್ಟಣದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರವರ ಕಾರ್ಯಲಯ ನಂ.3 ಕಾಲುವೆ ಉಪವಿಭಾಗ ಕಚೇರಿ ಆವರಣದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸಹಾಯಕ ಅಭಿಯಂತರರಾದ ಬಸವರಾಜ ರವರ ಮೂಲಕ ಮನವಿ ಸಲ್ಲಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಕೆ.ನಾಗಲಿಂಗಸ್ವಾಮಿ ಮಾತನಾಡಿ ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ಉದ್ಯೋಗದ ಭದ್ರತೆ ನೀಡಬೇಕು, ಸರ್ಕಾರದ ನಿರ್ದೇಶನದಂತೆ ವರ್ಷಪೂರ್ತಿ ಕೆಲಸ ನೀಡಬೇಕು,ಕಾರ್ಮಿಕರ ವೇತನ, ಪಿಎಫ್, ಇ.ಎಸ್.ಐ. ಪಾವತಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು.ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ನೇರ ಪಾವತಿಗೆ ಶಿಫಾರಸು ಮಾಡಬೇಕು ಕಾಲುವೆ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ನೀರು ನಿಂತ ನಂತರವು ಕೆಲಸದಲ್ಲಿ ಮುಂದುವರೆಸಬೇಕು.ಯರಮರಸ್ ವೃತ್ತದ ಸಿಂಧನೂರು, ಸಿರಿವಾರ ಮತ್ತು ಯರಮರಸ್ ವಿಭಾಗದ ಎಲ್ಲಾ ಉಪ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಜೂನ್ ತಿಂಗಳಿAದ ವೇತನ ಪಾವತಿಯಾಗದೆ ಇರುವುದರಿಂದ ತಕ್ಷಣವೇ ಬಾಕಿ ವೇತನ, ಪಿಎಫ್, ಇ.ಎಸ್.ಐ. ಪಾವತಿಗೆ ಕ್ರಮ ವಹಿಸಬೇಕು. ಏಪ್ರಿಲ್ ತಿಂಗಳಿನಿAದ ಕಾರ್ಮಿಕರ ತುಟ್ಟಿ ಭತ್ಯೆ ಹೆಚ್ಚಾಳವಾಗಿದ್ದು ತಕ್ಷಣ ಕಾರ್ಮಿಕರ ಖಾತೆಗೆ ಜಮಾ ಮಾಡಬೇಕು.ಟೆಂಡರ್ ಪಡೆದ ಗುತ್ತೇದಾರರು ಗುತ್ತಿಗೆ ಒಪ್ಪಂದದAತೆ ಕಾರ್ಮಿಕರಿಗೆ ಪ್ರತಿ ತಿಂಗಳು ವೇತನ, ಪಿಎಫ್, ಇ.ಎಸ್.ಐ.,ಪಾವತಿಸದ ಗುತ್ತಿಗೆದಾರರನ್ನು ಗುತ್ತಿಗೆ ಒಪ್ಪಂದ ತಕ್ಷಣ ರದ್ದುಪಡಿಸಿ ಗುತ್ತೇದಾರರ ಲೈಸೆನ್ಸ್ ಕಪ್ಪು ಪಟ್ಟಿಗೆ ಸೇರಿಸಬೇಕು. ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ನೇರ ಪಾವತಿಗೆ ಶಿಫಾರಸು ಮಾಡಬೇಕು. ಕಾಲುವೆ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಸಮವಸ್ತ್ರ, ಐಡಿ ಕಾರ್ಡ್ ಸೇರಿದಂತೆ ಮೂಲ ಸೌಕರ್ಯ ನೀಡಬೇಕು. ಕಾನೂನು ಬಾಹಿರವಾಗಿ 26 ದಿನಗಳ ವೇತನ ಪಾವತಿ ಮಾಡುವುದನ್ನು ತಕ್ಷಣ ನಿಲ್ಲಿಸಿ.ಕಚೇರಿ ಮತ್ತು ಕ್ಯಾಂಪ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತಿಂಗಳಪೂರ್ತಿ ವೇತನ ಪಾವತಿ ಮಾಡಬೇಕು. ಕಾರ್ಮಿಕರಿಗೆ ಉದ್ಯೋಗದ ಭದ್ರತೆ ನೀಡುವ ಮೂಲಕ ಕಾರ್ಮಿಕ ಕುಟುಂಬಗಳನ್ನು ಗೌರವದಿಂದ ಬದುಕಲು ಅವಕಾಶ ಮಾಡಿಕೋಬೇಕು. ಎಂದು ಒತ್ತಾಯಿಸಿದರು.
ಉಪ ವಿಭಾಗದ ಅಧ್ಯಕ್ಷ ಬಸವಲಿಂಗಪ್ಪ ಜಂಬಲದಿನ್ನಿ,ಜಲೀಲ್ ಪಾಷಾ, ಗೋಪಾಲ ರಾವ್ ಇಮ್ರಾನ್ ,ಕೃಷ್ಣ, ಶಿವಣ್ಣ, ಸೇರಿದಂತೆ ಉಪ ವಿಭಾಗದ ಕಾರ್ಮಿಕರು ಇದ್ದರು.
ಮಾನ್ವಿ: ಪಟ್ಟಣದ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯ ಆವರಣದಲ್ಲಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದಿAದ ಮನವಿ ಸಲ್ಲಿಸಲಾಯಿತು.

