ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ಪ್ರಸ್ತುತ 2025-26ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಯ ಕಾರ್ಯಕ್ರಮದಲ್ಲಿ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು.
ನಗರದ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಸ್ತುತ ಸಾಲಿನ ಸ್ಪರ್ಧೆಯಲ್ಲಿ ತಾಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಭಾಗವಹಿಸಿದ್ದರು. ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಉದ್ಘಾಟನೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಹಿರೇಮಠ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಮಾನಮ್ಮ ರಾಮದಾಸ್ ನಾಯಕ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಾಲಕರ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ರವೀಂದ್ರಗೌಡ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕರು ಹಾಗೂ ಕಾರ್ಯಕ್ರಮ ನೋಡಲ್ ಅಧಿಕಾರಿಗಳಾದ ಕುಮಾರಸ್ವಾಮಿ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕ ಅಮರೇಶ ಹೂಗಾರ್ ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವೀರೇಶಪ್ಪ ಕಾರ್ಯಕ್ರಮ ನಿರೂಪಿಸಿದರೆ. ಕೊನೆಯಲ್ಲಿ ಶಿಕ್ಷಕ ರಾಮದಾಸ ನಾಯಕ್ ವಂದಿಸಿದರು.
ವೇದಿಕೆ ಮೇಲೆ ಸಿ.ಆರ್.ಪಿ-ಬಿ.ಆರ್.ಪಿ ಸಂಘದ ಅಧ್ಯಕ್ಷ ಬಸವರಾಜ ಅಂಗಡಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ವಿಠಲ, ಚಿತ್ರಕಲಾ ಶಿಕ್ಷಕರ ಸಂಘದ ಪಿಎಲ್ ಪಾತ್ರೋಟಿ, ಜಿಪಿಟಿ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಬಸವರಾಜ, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಚನ್ನಬಸವ, ಬಿ.ಆರ್.ಪಿಗಳಾದ ಬಸವರಾಜ ಆನೆಗುಂದಿ, ನಾಗಪ್ಪ ಕಲ್ಲೂರು, ಮೈನುದ್ದೀನ್ , ಶಿಕ್ಷಣ ಸಂಯೋಜಕರಾದ ಹನುಮಂತಪ್ಪ ನಾಯ್ಕರ್, ಹುಲುಗಪ್ಪ, ಜಿಪಿಟಿ ಸಂಘದ ತಾಲೂಕು ಅಧ್ಯಕ್ಷ ಹನುಮೇಶ, ನಿರ್ಣಾಯಕರಾಗಿ ತುಳಸಿದಾಸ, ವೀರೇಶ ಗೋನವಾರ, ವೀರೇಶ ಸಾಲಿಮಠ, ದುರುಗಪ್ಪ ಗುಡದೂರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

