ಡಿಸೆಂಬರ್ 10 ರಿಂದ 14 ರವರೆಗೆ ಜೆಎನ್ ಟಿಯು ವಿಶ್ವವಿದ್ಯಾಲಯ, ಕಾಕಿನಾಡ ಆಂಧ್ರಪ್ರದೇಶದಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡಕ್ಕೆ ನಗರದ
ಸರ್ಕಾರಿ ಡಿಗ್ರಿ ಕಾಲೇಜಿನ ಬಿಎ 5 ನೇ ಸೆಮಿಸ್ಟರ್ ವಿದ್ಯಾರ್ಥಿ ಕುಮಾರ್ ಅಮೀನ್ ಸಾಬ್ ತಂ.ಖಾದರ್ ಸಾಬ್, ಬಿಎ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿ ಕುಮಾರ್ ತಿಮ್ಮಣ್ಣ ತಂ.ಪರಮಣ್ಣ ಆಯಕ್ಎಯಾಗಿದ್ದಾರೆಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಾಂಡು ಹೇಳಿದರು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡವನ್ನು ಪ್ರತಿನಿಧಿಸಿ ನಮ್ಮ ಕಾಲೇಜಿಗೂ ಹಾಗೂ ತಾಲೂಕಿಗೂ ಕೀರ್ತಿ ತಂದಿದ್ದಾರೆ. ಇವರಿಗೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಪ್ರಾಚಾರ್ಯರು, ವಿದ್ಯಾರ್ಥಿ ಬಳಗ ಇವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ: ಕಾಲೇಜಿನ ಹಿರಿಯ ಪ್ರಾಧ್ಯಾಪಕ ಪ್ರೊ.ಜಾಜಿ ದೇವೇಂದ್ರಪ್ಪ, ಪ್ರೊ.ಪುಷ್ಪ, ಪ್ರೊ.ಹಿಷರತ ಬೇಗಂ, ಪತ್ರಾಂಕಿತ ವ್ಯವಸ್ಥಾಪಕರಾದ ಮೊಹಮ್ಮದ್ ಸಿದ್ಕಿಕಿ, ಸಹಾಯಕ ಪ್ರಾಧ್ಯಾಪಕ ಜಯಶ್ರೀ ಪಾಟೀಲ್, ಉಪನ್ಯಾಸಕರಾದ ರಾಜೇಶ ಎಂ, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕ ಡಾ.ಲವಕುಮಾರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಶಿವ.ಕೆ, ಸೇರಿದಂತೆ ಸಿಬ್ಬಂದಿ ವರ್ಗದವರಿದ್ದರು.

Leave a Reply

Your email address will not be published. Required fields are marked *