ರಾಯಚೂರು ಡಿಸೆಂಬರ್ 08
(ಕರ್ನಾಟಕ ವಾರ್ತೆ): ಇಲ್ಲಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2025-26ನೇ ಸಾಲಿನ ರಾಂಪ್ ಯೋಜನೆಯಡಿಯಲ್ಲಿ ಬೆಂಗಳೂರಿನ ಭಾರತೀಯ ರಫ್ತು ಸಂಸ್ಥೆಯ ರಫ್ತು ಉತ್ತೇಜನ ಮತ್ತು ಸೌಲಭ್ಯ ಒಕ್ಕೂಟ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಗಾರವನ್ನು ನಗರದ ಹೈದ್ರಾಬಾದ್ ರಸ್ತೆಯ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಡಿಸೆಂಬರ್ 10ರ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಘಟಕಗಳ ಮುಖ್ಯಸ್ಥರು, ಉದ್ದಿಮೆದಾರರು ಕಾರ್ಯಾಗಾರದಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಸಹಾಯಕ ನಿರ್ದೇಶಕರಾದ ಲಕ್ಷ್ಮೀಕಾಂತ ಕುಲಕರ್ಣಿ ಅವರ ಮೊಬೈಲ್ ಸಂಖ್ಯೆ 8861241093ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *