ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಮುಂದುವರಿದಿರುವ ಒಣ ಹವೆಯ ಪ್ರಭಾವ ಇಂದು ಕೂಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇಲ್ಲದ ಒಣ ವಾತಾವರಣ ಮುಂದುವರಿಯಲಿದೆ.
ಬೆಂಗಳೂರು ನಗರದಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಬೆಳಗ್ಗಿನ ವಾತಾವರಣ ಕಂಡುಬರುತ್ತಿದ್ದು, ಇಂದು ಕೂಡ ಅದೇ ಪರಿಸ್ಥಿತಿ ಮುಂದುವರಿಯಲಿದೆ. ತಾಪಮಾನದಲ್ಲಿ ಗಣನೀಯ ಇಳಿಕೆಯ ಹಿನ್ನಲೆಯಲ್ಲಿ ಚಳಿಯ ಉಗ್ರತೆ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರಿನಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ ಸುಮಾರು 8 ಕಿ.ಮೀ. ಇರಲಿದ್ದು, ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 16.4°C ದಾಖಲಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆರಹಿತ ವಾತಾವರಣವಿರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಕೆಲವು ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇಂದು ಕೂಡ ಅದೇ ಹವಾಮಾನ ಕಾಣಿಸಿಕೊಳ್ಳಲಿದೆ.

ಒಟ್ಟಾರೆ, ರಾಜ್ಯದ ಎಲ್ಲಾ ಭಾಗಗಳಲ್ಲೂ ಒಣಗಾಳಿ ಹಾಗೂ ಚಳಿ ಮಿಶ್ರಿತ ವಾತಾವರಣ ಮುಂದುವರಿಯಲಿದ್ದು, ವಿಶೇಷವಾಗಿ ಬೆಂಗಳೂರು ಸೇರಿದಂತೆ ಒಳನಾಡು ಭಾಗಗಳಲ್ಲಿ ಮಂಜು ಮುಸುಕಿದ ಬೆಳಗಿನ ವಾತಾವರಣ ಮುಂದುವರಿಯಲಿದ್ದು, ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬರುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *