ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ಇದೆ ಡಿಸೆಂಬರ್ 21ರ ಭಾನುವಾರ ದಂದು ಹುಟ್ಟಿನಿಂದ ಐದು ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕುವ ಪಲ್ಸ್ ಪೋಲಿಯೊ ಕಾರ್ಯಕ್ರಮ ರಾಯಚೂರು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ನಗರ, ಪಟ್ಟಣಗಳಲ್ಲಿಯ ಜನತೆಯು ತಮ್ಮ ಮನೆಗಳಿಗೆ ಹತ್ತಿರದ ಪೋಲಿಯೊ ಬೂತ್ಗಳ ಮಾಹಿತಿಯನ್ನು ಕ್ಯೂಆರ್ ಕೋಡ್ ಸ್ಕ್ಯಾನ್ರ‍್ನ್ನು ಸ್ಕ್ಯಾನ್ ಮಾಡಿ ತಮ್ಮಗೆ ಹತ್ತಿರದ ಬೂತ್ಗಳಲ್ಲಿ ಲಸಿಕೆ ಹಾಕಿ ಅಭಿಯಾನದಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪಾಲಕರು ನೋಡಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇವರ ಸಲಹೆಯಂತೆ ಈ ಬಾರಿ ರಾಯಚೂರು, ಮಾನವಿ, ದೇವದುರ್ಗ, ಲಿಂಗಸೂಗುರು, ಸಿಂಧನೂರು ನಗರ ಪ್ರದೇಶಗಳ ನಾಗರಿಕರಿಗೆ ಬೂತ್ಗಳ ಮಾಹಿತಿ ಕೊರತೆಯಾಗಬಾರದು ಎಂದು ಕ್ಯೂಆರ್ ಕೋಡ್ ಸ್ಕ್ಯಾನರ್ ಸಿದ್ದಪಡಿಸಲಾಗಿದ್ದು, ತಮ್ಮ ಮೊಬೈಲ್ಗಳ ಮೂಲಕ ಸ್ಕ್ಯಾನ್ ಮಾಡಿ ಬೂತ್ಗಳ ಮಾಹಿತಿ ಪಡೆದು ತಮಗೆ ಹತ್ತಿರದಲ್ಲಿರುವ ಬೂತ್ಗಳಲ್ಲಿ ಎರಡು ಹನಿ ಲಸಿಕೆಯನ್ನು ಮಗುವಿಗೆ ಹಾಕಿಸಿ ಪೋಲಿಯೋ ಮೇಲಿನ ನಮ್ಮ ಗೆಲುವನ್ನು ಮುಂದುವರೆಸಲು ಕೈಜೊಡಿಸುವಂತೆ ಕೋರಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್. ಅವರು ಮಾತನಾಡಿ, ನಮ್ಮ ಭಾರತ ದೇಶದಲ್ಲಿ ಕೊನೆಯ ಪೋಲಿಯೋ ಪ್ರಕರಣ 2011 ಜನವರಿಯಲ್ಲಿ ಪಶ್ಚಿಮ ಬಂಗಾಳ ರಾಜ್ಯದಲ್ಲಿ ವರದಿಯಾದ ನಂತರ ಕಳೆದ 14 ವರ್ಷಗಳಿಂದ ನಮ್ಮ ದೇಶದಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಆದರೂ ಸಹ ನೇರೆಯ ರಾಷ್ಟ್ರಗಳಲ್ಲಿ ಪ್ರಕರಣಗಳು ಇರುವುದರಿಂದ ಡಿಸೆಂಬರ್ 21 ರಂದು ದೇಶಾದ್ಯಾಂತ ಲಸಿಕೆ ಹಾಕಲಾಗುತ್ತಿದ್ದು, ನಮ್ಮ ಜಿಲ್ಲೆಯಲ್ಲಿ ಲಸಿಕೆ ಹಾಕಲು ತಂಡಗಳ ರಚನೆ ಮಾಡಲಾಗಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ, ಬಸ್ ನಿಲ್ದಾಣ, ರೈಲು ನಿಲ್ದಾಣ, ಅಂಗನವಾಡಿಗಳಲ್ಲಿ ಮತ್ತು ಶಾಲೆಗಳಲ್ಲಿ ಹಾಗೂ ಕೊಳಚೆ ಪ್ರದೇಶ ಮುಂತಾದೆಡೆ ಬೂತ್ ತೆರೆಯಲಾಗುವುದು. ಇದಕ್ಕಾಗಿ ಈಗಿನಿಂದಲೆ ಗ್ರಾಮಗಳಲ್ಲಿ ಸಿಬ್ಬಂದಿಯವರು ಖುದ್ದು, ಮನೆ ಭೇಟಿ ನೀಡುತ್ತಿದ್ದಾರೆ. ಇದರೊಂದಿಗೆ ಸ್ಥಳೀಯ ಸಂಸ್ಥೆಗಳ ಕಸ ವಿಲೇವಾರಿ ವಾಹನ, ಆಟೊ ಮೂಲಕ ಮೈಕಿಂಗ್, ಜಾಗೃತಿ ಜಾಥಾ, ಸಾಮಾಜಿಕ ಜಾಲ ತಾಣಗಳ ಮೂಲಕ ನಿರಂತರ ಪ್ರಚಾರವನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಆರ್.ಸಿ.ಹೆಚ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *