ರಾಯಚೂರು ಡಿಸೆಂಬರ್ 19 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ವ್ಯಾಪ್ತಿಯ 110/11 ಕೆವಿ ಮಲಿಯಾಬಾದ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಡಿಸೆಂಬರ್ 22ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಮಲಿಯಾಬಾದ ವಿದ್ಯುತ್ ಉಪ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಗ್ರಾಮೀಣ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *