ಹಿರಿಯ ಪತ್ರಕರ್ತ ಬಸವರಾಜ ಭೋಗಾವತಿ ಇವರಿಗೆ ಪಿತೃ ವಿಯೋಗ
ಮಾನ್ವಿ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಜಿಲ್ಲಾ ವರದಿಗಾರರು ಹಾಗೂ ಮಾನ್ವಿ ತಾಲೂಕಿನ ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತರಾದ ಬಸವರಾಜ ಭೋಗಾವತಿ ಅವರ ತಂದೆ ತಿಪ್ಪಣ್ಣ ಬಿ. (90) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಶನಿವಾರ ಸಂಜೆ ಸಿಂಧನೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿನಾಂಕ 21ರಂದು (ಭಾನುವಾರ) ಮಧ್ಯಾಹ್ನ 1.30ಕ್ಕೆ ಸಿಂಧನೂರು ನಗರದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *