ಮಾನ್ವಿ : ಪಟ್ಟಣದ ಬಿ.ವಿ.ಆರ್ ಇ-ಟೆಕ್ನೋ ಸ್ಕೂಲ್ ಆವರಣದಲ್ಲಿ ಡಿಸೆಂಬರ್ 27ರಂದು ಸಂಜೆ 5 ಗಂಟೆಗೆ ಶ್ರೀ ಬಸವ ಸೇವಾ ಪ್ರತಿಷ್ಠಾನ ಹಾಗೂ ಸುದ್ದಿಮೂಲ ದಿನಪತ್ರಿಕೆ ರಾಯಚೂರು, ಬಸವ ಕೇಂದ್ರ ಮಾನ್ವಿ, ಶರಣ ಸಾಹಿತ್ಯ ಪರಿಷತ್ತು ಮಾನ್ವಿ, ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಸುದ್ದಿಮೂಲ ಸಂಪಾದಕರಾದ ಶ್ರೀ ಬಸವರಾಜಸ್ವಾಮಿ ರವರ ರಚನೆಯಾದ ಬಸವ ಗೀತೆ – ಸತ್ಯ ಸಂವಾದ 9 ಸಂಪುಟಗಳ ಗುಚ್ಚ ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಣಾಧಿಕಾರಿಗಳಾದ ಡಿ.ಜಿ.ಕರ್ಕಿಹಳ್ಳಿ ಅವರು ಉದ್ಘಾಟಿಸಲಿದ್ದು, ನಿವೃತ್ತ ಉಪನ್ಯಾಸಕರಾದ ಬಿ.ಜಿ.ಹುಲಿ ಅವರು ಗ್ರಂಥ ಲೋಕಾರ್ಪಣೆ ಹಾಗೂ ಪುಸ್ತಕದ ಕುರಿತು ಅನಿಸಿಕೆ ವ್ಯಕ್ತಪಡಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಸವ ಕೇಂದ್ರದ ಗೌರವಾಧ್ಯಕ್ಷರಾದ ಡಾ. ಬಸವಪ್ರಭು ಪಾಟೀಲ್ ಬೆಟ್ಟದೂರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೃತಿಯ ಲೇಖಕರಾದ ಸುದ್ದಿಮೂಲ ಪತ್ರಿಕೆಯ ಸಂಪಾದಕ ಬಸವರಾಜಸ್ವಾಮಿ, ಬಿ.ವಿ.ಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ವಿ.ರೆಡ್ಡಿ, ಬಸವ ಕೇಂದ್ರದ ತಾಲೂಕಾ ಅಧ್ಯಕ್ಷ ಜಿ.ಎಂ. ರಂಗಪ್ಪ ಮೇದಾ, ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಇ. ನರಸಿಂಹ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾ ಅಧ್ಯಕ್ಷ ಶರಣಬಸವ ನೀರಮಾನ್ವಿ, ತಾಲೂಕಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ರಾಜಾ ಸುಭಾಶ್ಚಂದ್ರ ನಾಯಕ, ಹೆಚ್. ಶರ್ಪುದ್ದೀನ್ ಪೋತ್ನಾಳ್, ಮೂಕಪ್ಪ ಕಟ್ಟಿಮನಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು, ಬಸವ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಾಲೂಕಾ ಸುದ್ದಿಮೂಲ ವರದಿಗಾರರಾದ ಪಿ. ಪರಮೇಶ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *