ಲಿಂಗಸಗೂರು : ಡಿ 29 .
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 140ನೇ ಸಂಸ್ಥಾಪನಾ ದಿನಾಚರಣೆಯನ್ನು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಶರಣಗೌಡ ಪಾಟೀಲ್ ಬಯ್ಯಾಪುರ್ ರವರು ನೇತೃತ್ವ ವಹಿಸಿದರು . ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು, ರಾಷ್ಟ್ರದ ಏಕತೆ, ಅಖಂಡತೆ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ ನಾಯಕರು ಮತ್ತು ಮಹಾನ್ ತ್ಯಾಗಿಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿ ಕಾಂಗ್ರೆಸ್ ಪಕ್ಷವು ದೇಶದ ಪ್ರಜಾಪ್ರಭುತ್ವದ ರಕ್ಷಣೆಗೆ ಹಾಗೂ ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ ಕರಡಕಲ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಪಾಮಯ್ಯ ಮುರಾರಿ, ಗುಂಡಪ್ಪ ನಾಯಕ್, ಸೋಮಶೇಖರ್ ಐದನಾಳ, ಪ್ರಮೋದ ಕುಲ್ಕರ್ಣಿ, ಶರಣಬಸವ ವಾರದ್, ಶಿವನಗೌಡ ವಂದಲ್ಲಿ, ಅನಿಷ್ ಪಾಷಾ, ಅಮರೇಶ ಮೆದಿನಪುರ, ವೆಂಕಟೇಶ ಕಳ್ಳಿಲಿಂಗಸಗೂರು, ನಾಗರಾಜ್ ಕುಪ್ಪಣ್ಣ, ಲಾಲಪ್ಪ ರಾಠೋಡ, ಜಗದೀಶ ಪಾಟೀಲ್, ಪ್ರಕಾಶ್ ಕುರಿ, ಶಿವಾಜಿ ಕಟ್ಟಿಮನಿ, ಶರಣಪ್ಪ ಹುನುಕುಂಟಿ, ಮೋಹನ್ ಗೋಸ್ಲೆ ಕರಡಕಲ್, ಮೌನೇಶ ತೊಪ್ಪಲ್ ದೊಡ್ಡಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

