ಸಿಂಧನೂರು ಜನವರಿ 06: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಮತ್ತು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಂಧನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಸಮೀಪದ ತುರಕಟ್ಟಿ ಕ್ಯಾಂಪ್ ನಲ್ಲಿ ಇರುವ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಆರೋಗ್ಯ ಮತ್ತು ಪೌಷ್ಟಿಕ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು
ಕಾರ್ಯಕ್ರಮದ ಕುರಿತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಅವರು ಮಾತನಾಡಿ ಗರ್ಭಿಣಿಯರಲ್ಲಿ ಮತ್ತು ಮಕ್ಕಳಲ್ಲಿ ಕಂಡುಬರುವ ರಕ್ತಹೀನತೆಯನ್ನು ಮತ್ತು ಅಪೌಷ್ಟಿಕತೆ ತಡೆಗಟ್ಟುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರದಲ್ಲಿ ದೊರೆಯುವ ಪೌಷ್ಟಿಕ ಆಹಾರವನ್ನು ತಾಯಿಂದಿರು ಸೇವನೆ ಮಾಡಬೇಕು ಮತ್ತು ತಮ್ಮ ಮಕ್ಕಳ ಆರೋಗ್ಯದ ಬೆಳವಣಿಗೆಗೆ ತಪ್ಪದೇ ಪೌಷ್ಟಿಕ ಆಹಾರವನ್ನು ನೀಡಬೇಕು ಮಕ್ಕಳ ಬೆಳವಣಿಗೆ ಬಗ್ಗೆ ಮಕ್ಕಳ ಆರೈಕೆ ಮಾಡಬೇಕು ಎಂದರು
ನಂತರ ಮಾತನಾಡಿದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು ಲಿಂಗಮ್ಮ ಅವರು ಮಾತನಾಡಿ ಗರ್ಭಿಣಿ ಅವಧಿಯಲ್ಲಿ ರಕ್ತಹೀನತೆಯಿಂದ ಉಂಟಾಗದಂತೆ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಪೌಷ್ಟಿಕ ಆಹಾರ ಬಹಳ ಮುಖ್ಯವಾಗಿದೆ ಹಾಗೂ ಮಕ್ಕಳ ಆರೋಗ್ಯಯುತ ಬೆಳವಣಿಗೆಗೆ ಬಾಲ್ಯವಸ್ಥೆಯಲ್ಲಿ ಬರಬಹುದಾದ ಕಾಯಿಲೆಗಳನ್ನು ತಡೆಗಟ್ಟಲು ಲಸಿಕೆಯನ್ನು ಪಡೆಯುವುದು ಕಡ್ಡಾಯ ಹಾಗೂ ಮಕ್ಕಳ ಉತ್ತಮ ಆರೋಗ್ಯಕರ ಬೆಳವಣಿಗೆಗೆ ಪೌಷ್ಟಿಕ ಆಹಾರ ಬಹಳಷ್ಟು ಮಹತ್ವ ವಹಿಸುವುದು ತಾಯಿಂದಿರು ಹಾಗೂ ತಮ್ಮ ಮಕ್ಕಳನ್ನು ಆರೈಕೆ ಮಾಡುವುದು ಬಹಳಷ್ಟು ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮದ ತಾಯಿಂದಿರು ಹಾಗೂ ಗರ್ಭಿಣಿಯರು ಅಂಗನವಾಡಿ ಕಾರ್ಯಕರ್ತರಾದ ರಾಜೇಶ್ವರಿ ಮತ್ತು ಆಶಾ ಕಾರ್ಯಕರ್ತೆ ಮಾಲಾಶ್ರೀ ಇನ್ನಿತರರು ಉಪಸ್ಥಿತರಿದ್ದರು,

 

Leave a Reply

Your email address will not be published. Required fields are marked *