ಬಳಗಾನೂರು ಜ,6:-ಪಟ್ಟಣ ಪಂಚಾಯಿತಿ ಮತ್ತು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ.

 

ನೇತೃತ್ವ: ಲೋಕಾಯುಕ್ತ ಪೊಲೀಸ್ ಉಪನಿರೀಕ್ಷಕರಾದ ಕರುಣೇಶ್ ಗೌಡ ಮತ್ತು ಶ್ರೀಕಾಂತ ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

ಕಾರಣ: ಕೆಲವು ತಿಂಗಳುಗಳ ಹಿಂದೆ ಉಪಲೋಕಾಯುಕ್ತ ವೀರಪ್ಪ ಅವರು ರಾಯಚೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಸಲ್ಲಿಕೆಯಾಗಿದ್ದವು.

ಉದ್ದೇಶ: ಸಾರ್ವಜನಿಕರು ನೀಡಿದ ದೂರುಗಳ ಆಧಾರದ ಮೇಲೆ ವಸ್ತುಸ್ಥಿತಿಯನ್ನು ಅಧ್ಯಯನ ಮಾಡುವುದು ಮತ್ತು ಕರ್ತವ್ಯ ಲೋಪ ಎಸಗಿದ ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳುವುದು ಈ ದಾಳಿಯ ಮುಖ್ಯ ಉದ್ದೇಶವಾಗಿದೆ.

ಪಟ್ಟಣ ಪಂಚಾಯಿತಿ ಹಾಗೂ ಆರೋಗ್ಯ ಕೇಂದ್ರದಲ್ಲಿನ ವ್ಯವಸ್ಥೆ ಮತ್ತು ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿರುವ ತಂಡವು, ಮುಂದಿನ ಕ್ರಮಕ್ಕಾಗಿ ವರದಿಯನ್ನು ಸಿದ್ಧಪಡಿಸುತ್ತಿದೆ ಎನ್ನಲಾಗಿದೆ.

ವರದಿ: ಸುರೇಶ ಬಳಗಾನೂರು

Leave a Reply

Your email address will not be published. Required fields are marked *