ರಾಯಚೂರು ಜನವರಿ 07 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026 ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಜನವರಿ 17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ರಾಜ್ಯ ಮಟ್ಟದ ವಾಲಿಬಾಲ್ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಈ ಪಂದ್ಯಗಳ ನೋಡಲ್ ಅಧಿಕಾರಿಗಳಾದ ಟಿಪಿಇಒ ಮಾರುತಿ ಮೊ.ಸಂಖ್ಯೆ:9986121146 ಅಥವಾ ದೈಹಿಕ ಶಿಕ್ಷಕರಾದ ಮುಕ್ತರ್ ಅಹ್ಮದ್ ಅವರ ಮೊ.ಸಂಖ್ಯೆ:8050224221ಗೆ ಸಂಪರ್ಕಿಸಿ ತಂಡದ ಹೆಸರು ನೋಂದಾಯಿಸಬಹುದಾಗಿದೆ.
ಜನವರಿ 18ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಕಬ್ಬಡಿಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಈ ಪಂದ್ಯಗಳ ನೋಡಲ್ ಅಧಿಕಾರಿಗಳಾದ ದೇವದುರ್ಗದ ಟಿಪಿಇಒ ಮುದುಕನ್ನ ಕವಡಿಮಟ್ಟಿ ಮೊ.ಸಂಖ್ಯೆ: 9448619792 ಅಥವಾ ದೈಹಿಕ ಶಿಕ್ಷಕರಾದ ಉಮೇಶ ಮೊ.ಸಂಖ್ಯೆ: 9448218095ಗೆ ಸಂಪರ್ಕಿಸಿ ತಂಡದ ಹೆಸರು ನೋಂದಾಯಿಸಬಹುದಾಗಿದೆ.
ಕ್ರೀಡೆಗಳಲ್ಲಿ ಆಸಕ್ತರು ಭಾಗವಹಿಸಿ ರಾಯಚೂರು ಜಿಲ್ಲೆ ಹೆಮ್ಮೆಪಡುವಂತಹ ಕ್ರೀಡೋತ್ಸವ ಮೂಡಿಬರಲು ಸಹಕರಿಸಿ ರಾಯಚೂರು ಉತ್ಸವವನ್ನು ಯಶಸ್ವಿಗೊಳಿಸಲು ಎಲ್ಲಾ ಕ್ರೀಡಾಪಟುಗಳು ಮತ್ತು ಸಾರ್ವಜನಿಕರಲ್ಲಿ ವಿನಂತಿಸಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
