‘ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗೆ ರಾಜ್ಯ ಸರ್ಕಾರ ದಿಟ್ಟಹೆಜ್ಜೆ ಇಟ್ಟಿದ್ದು, 9 ರಿಂದ 14 ವರ್ಷದೊಳಗಿನ ಶಾಲಾ ಹೆಣ್ಣು ಮಕ್ಕಳಿಗೆ ಜಿಲ್ಲೆಯಲ್ಲಿ ಉಚಿತ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್‌ಪಿವಿ) ಲಸಿಕೆ ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

115 ದಿನಗಳ ಅವಿರತ ಜನ ಹೋರಾಟಕ್ಕೆ ಜಯ ಸಿಕ್ಕಿದೆ. ಜಿಲ್ಲೆಯ ಜನತೆಯ ದಶಕಗಳ ಕನಸು ನನಸಾಗಿದೆ. ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಗರಕ್ಕೆ ಶುಕ್ರವಾರ ಬಂದು ಘೋಷಣೆ ಮಾಡಿದ್ದಾರೆ.
‘ಉದ್ದೇಶಿತ ಖಾಸಗಿ-ಸಾರ್ವಜನಿಕ ಸಹಭಾಗಿತ್ವವನ್ನು ಸಂಪೂರ್ಣ ಕೈಬಿಡುತ್ತೇವೆ. ಹೋರಾಟವನ್ನು ಕೈಬಿಡಿ’ ಎಂದು ಮನವಿ ಮಾಡಿದರು.

‘ರಾಜ್ಯದ 22 ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ವಿಜಯಪುರ ಸೇರಿದಂತೆ ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲೂ ಸರ್ಕಾರವೇ ವೈದ್ಯಕೀಯ ಕಾಲೇಜು ಸ್ಥಾಪಿಸಲಿದೆ. ಜೊತೆಗೆ ಟ್ರಾಮಾ ಸೆಂಟರ್‌, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ತೆರೆಯುತ್ತೇವೆ’ ಎಂದು ಭರವಸೆ ನೀಡಿದರು.

ಸಚಿವ ಶಿವಾನಂದ ಪಾಟೀಲ ಮಾತನಾಡಿ, ರಾಜ್ಯಕ್ಕೆ ಅನ್ನಭಾಗ್ಯ ನೀಡಿರುವ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆರೋಗ್ಯ ಭಾಗ್ಯ ನೀಡಿರುವುದಕ್ಕೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ’ ಎಂದರು.

‘ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಿ, ಅಗತ್ಯ ಅನುದಾನ ನೀಡಬೇಕು’ ಎಂದು ಮನವಿ ಮಾಡಿದರು.

ಪ್ರಕರಣ ಕೈಬಿಡಿ:

ಮುಖ್ಯಮಂತ್ರಿಯವರಿ ಸರ್ಕಾರಿ ಕಾಲೇಜು ಘೋಷಣೆ ಮಾಡಿರುವುದಕ್ಕೆ ಹೋರಾಟ ಸಮಿತಿ ಸ್ವಾಗತಿಸಿದೆ. ಜೈಲಿನಲ್ಲಿರುವ ಎಲ್ಲಾ ಹೋರಾಟಗಾರರನ್ನು ಬೇಷರತ್ತಾಗಿ ಕೂಡಲೇ ಬಿಡುಗಡೆಗೊಳಿಸಬೇಕು. ಎಲ್ಲಾ 27 ಜನರ ಮೇಲಿನ ಸುಳ್ಳು ಪ್ರಕರಣಗಳನ್ನು ಶಾಶ್ವತವಾಗಿ‌ ಕೈ ಬಿಡಬೇಕು ಎಂದು ಹೋರಾಟ ಸಮಿತಿಯು ಆಗ್ರಹಿಸಿದೆ.

ಮುಖ್ಯಮಂತ್ರಿಗಳ ವಾಗ್ದಾನದಿಂದ ಇಂದಿನಿಂದ ಅನಿರ್ದಿಷ್ಟ ಧರಣಿ ಹಿಂಪಡೆಯಲಾಗಿದೆ. ಆದರೆ, ಸರ್ಕಾರಿ ವೈದ್ಯಕೀಯ ಕಾಲೇಜು ಶಂಕುಸ್ಥಾಪನೆ ಯಾಗುವವರೆಗೂ ಹೋರಾಟ ಸಮಿತಿಯು ಅಸ್ತಿತ್ವದಲ್ಲಿರುತ್ತದೆ ಮತ್ತು‌ ಅದಕ್ಕೆ ಸಂಬಂಧಿತ ಚಟುವಟಿಕೆಗಳನ್ನು ಬೇರೆ ಬೇರೆ ಸ್ವರೂಪಗಳಲ್ಲಿ ಮುಂದುವರೆಸಲಾಗುತ್ತದೆ’ ಎಂದು ತಿಳಿಸಿದ್ದಾರೆ.

‘ಎಲ್ಲಾ ಹೋರಾಟಗಾರರು ಜೈಲಿನಿಂದ ಬಿಡುಗಡೆಯಾಗಿ ಬರುವವರೆಗೂ ಯಾವುದೇ ವಿಜಯೋತ್ಸವ ಹೋರಾಟ ಸಮಿತಿಯಿಂದ ಇರುವುದಿಲ್ಲ. ಅವರು ಜೈಲಿನಿಂದ ಬಂದ ಮೇಲೆ ಸಭೆ ಸೇರಿ ನಿರ್ಧರಿಸಲಾಗುವುದು’ ಎಂದು ಹೋರಾಟ ಸಮಿತಿ ಸದಸ್ಯ ಎಚ್‌.ಟಿ.ಭರತ್‌ ಕುಮಾರ್‌ ‘ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಚಿವರಾದ ಶಿವಾನಂದ ಪಾಟೀಲ, ಎಂ.ಬಿ.ಪಾಟೀಲ, ಲಕ್ಷ್ಮಿ ಹೆಬ್ಬಾಳಕರ್, ರಾಮಲಿಂಗಾರೆಡ್ಡಿ, ಎಚ್.ಸಿ.ಮಹಾದೇವಪ್ಪ, ಡಾ.ಎಂ.ಸಿ.ಸುಧಾಕರ, ಬೈರತಿ ಸುರೇಶ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಯಶವಂತ ರಾಯಗೌಡ ಪಾಟೀಲ, ವಿಠಲ ಕಟಕದೊಂಡ, ಅಶೋಕ ಮನಗೂಳಿ, ಸಿ.ಎಸ್.ನಾಡಗೌಡ, ವಿಧಾನ ಪರಿಷತ್ ಸದಸ್ಯ ಸುನೀಲ್ ಗೌಡ ಪಾಟೀಲ, ಪ್ರಕಾಶ ಹುಕ್ಕೇರಿ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕೌಶಲಾಭಿವೃದ್ಧಿ ನಿಗಮದ ಕಾಂತಾ ನಾಯಕ, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಮಲ್ಲಿಕಾರ್ಜುನ ಲೋಣಿ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಬುರಾಣಪುರದ ಯೋಗಿಶ್ವರಿ ಮಾತಾ, ಮನಗೂಳಿಯ ಸಂಗನಬಸವ ಸ್ವಾಮೀಜಿ ಉಪಸ್ಥಿತರಿದ್ದರು.
ವಿಜಯಪುರ ನಗರದ ಕೇಂದ್ರ ಬಸ್‌ ನಿಲ್ದಾಣದ ಎದುರು ಪ್ರತಿಷ್ಠಾಪಿಸಿರುವ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಸಚಿವರು ಸ್ವಾಮೀಜಿಗಳು ಇದ್ದರು

ಸಿದ್ದರಾಮಯ್ಯ ಮುಖ್ಯಮಂತ್ರಿಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಕೆಚ್ಚೆದೆ ಬದ್ಧತೆ ಛಲದೊಂದ ಹೋರಾಡಿದ ಕೀರ್ತಿ ಕಿತ್ತೂರು ರಾಣಿ ಚನ್ನಮ್ಮಗೆ ಸಲ್ಲುತ್ತದೆವಚನಾನಂದ ಸ್ವಾಮೀಜಿ ಪಂಚಮಸಾಲಿ ಪೀಠಹರಿಹರ ಬೆಂಗಳೂರು ವಿಧಾನಸೌಧದ ಎದುರು ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನ ಮೂರ್ತಿ ಪ್ರತಿಷ್ಠಾಪಿಸಲು ಮುಖ್ಯಮಂತ್ರಿ ಸರ್ಕಾರ ಆದ್ಯತೆ ನೀಡಬೇಕು. ಈ ಮೂಲಕ ಗೌರವ ಸಲ್ಲಿಸಬೇಕು ಶಿವಾನಂದ ಪಾಟೀಲ ಸಚಿವಚನ್ನಮ್ಮ ಕೇವಲ ಒಂದು ಸಮಾಜದ ಸ್ವತ್ತಲ್ಲ ಬ್ರಿಟೀಷರ ವಿರುದ್ದ ಹೋರಾಡಿದ ದಿಟ್ಟ ಮಹಿಳೆ. ಜಾತ್ಯತೀತ ಮಾನವೀಯ ಮೌಲ್ಯ ಹೊಂದಿರುವ ಮಹಿಳೆಡಿ.ಕೆ.ಶಿವಕುಮಾರ್‌ ಉಪ ಮುಖ್ಯಮಂತ್ರಿಬಸವಣ್ಣನವರ ನಾಡಿನಲ್ಲಿ ಎಲ್ಲಾ ಧರ್ಮ ಜಾತಿಗಳನ್ನು ಅನೇಕ ಶ್ರೀಗಳು ಒಗ್ಗಟ್ಟಾಗಿ ತೆಗೆದುಕೊಂಡು ಹೋಗಿದ್ದು ಈ ಜಿಲ್ಲೆಗಳು ಸರ್ವಜನಾಂಗದ ಶಾಂತಿಯ ತೋಟವಾಗಿದೆ

Leave a Reply

Your email address will not be published. Required fields are marked *