ರಾಯಚೂರು, ಜನವರಿ 10 (ಕರ್ನಾಟಕ ವಾರ್ತೆ):
2026ರ ಜನವರಿ 29, 30 ಹಾಗೂ 31ರಂದು ರಾಯಚೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆಯಲಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ–2026ರ ಅಂಗವಾಗಿ ಕವಿಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಕವಿಗಳಿಂದ ಸ್ವರಚಿತ ಕವಿತೆಗಳನ್ನು ಆಹ್ವಾನಿಸಲಾಗಿದೆ.
ಕವಿತೆಗಳು ಸಂಪೂರ್ಣವಾಗಿ ಸ್ವತಂತ್ರ ರಚನೆಯಾಗಿರಬೇಕು. ಒಂದು ಪುಟವನ್ನು ಮೀರದಂತೆ ನುಡಿ ಅಥವಾ ಯುನಿಕೋಡ್ನಲ್ಲಿ ಟೈಪ್ ಮಾಡಿ ವರ್ಡ್ ಫಾರ್ಮೇಟಿನಲ್ಲಿ ಜನವರಿ 14ರೊಳಗೆ ಕಳುಹಿಸಬೇಕು.
ಕವಿತೆಗಳನ್ನು ಈ ಕೆಳಗಿನ ಮಾರ್ಗಗಳ ಮೂಲಕ ಸಲ್ಲಿಸಬಹುದು:
ಇ-ಮೇಲ್: raichurdipr@gmail.com
ಅಂಚೆ ಮೂಲಕ:
ಹಿರಿಯ ಸಹಾಯಕ ನಿರ್ದೇಶಕರ ಕಚೇರಿ,
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,
ಪತ್ರಿಕಾ ಭವನದ ಮೊದಲನೇ ಮಹಡಿ,
ಶ್ರೀ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದ ಹಿಂಭಾಗ,
ರೈಲ್ವೆ ನಿಲ್ದಾಣ ರಸ್ತೆ,
ರಾಯಚೂರು – ರಾಯಚೂರು ಜಿಲ್ಲೆ
ವಾಟ್ಸಪ್ ಮೂಲಕ: 9916111356 ಅಥವಾ 9008462236
ಕವಿತೆಯೊಂದಿಗೆ ಕಡ್ಡಾಯವಾಗಿ ಕವಿಯ ಹೆಸರು, ಸ್ಥಳ, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಹಾಗೂ ವಯಸ್ಸಿನ ದೃಢೀಕರಣಕ್ಕಾಗಿ ಎಸ್ಸೆಸ್ಸೆಲ್ಸಿ ಅಂಕಪಟ್ಟಿಯ ಪ್ರತಿಯೊಂದಿಗೆ ವಿಳಾಸದ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್ ಝೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು.
ಕವಿಗಳ ಆಯ್ಕೆ ಆಯ್ಕೆ ಸಮಿತಿಯ ತೀರ್ಮಾನದ ಮೇರೆಗೆ ನಡೆಯಲಿದ್ದು, ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಕೊನೆಯ ದಿನಾಂಕದ ನಂತರ ಬಂದ ಕವಿತೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ರಾಯಚೂರು ಜಿಲ್ಲಾ ಉತ್ಸವದ ಪುಸ್ತಕ ಪ್ರದರ್ಶನ, ವಿಚಾರ ಸಂಕಿರಣ ಹಾಗೂ ಕವಿಗೋಷ್ಠಿ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

