ರಾಯಚೂರು ಜನವರಿ 17 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ ಫರೀದ್ ಅವರು 2026ರ ಜನವರಿ 18 ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಜಕ್ಕೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಗ್ಗೆ 11.30ಕ್ಕೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹೆಲಿಪ್ಯಾಡ್ ಆಗಮಿಸಿ ಮಾನವಿಯ ಕೆ.ಜಿ.ರೋಡ್ನಲ್ಲಿರುವ ಅಕ್ಬರ್ ಮಸ್ಜಿದ್ ಆವರಣದಲ್ಲಿ ರಾಯಚೂರು ಜಿಲ್ಲಾ ಮಾನ್ವಿ ತಾಲೂಕಿನ ದಾರುಸ್ಸಲಾಮ್ ಫೌಂಡೇಶನ್ ಟ್ರಸ್ಟ್ ಅವರು ಆಯೋಜಿಸಿರುವ 121ನೇ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 2 ಗಂಟೆಗೆ ಮಾನ್ವಿಯಿಂದ ನಿರ್ಗಮಿಸಿ ರಸ್ತೆ ಮೂಲಕ ಹೈದರಾಬಾದ್ಗೆ ಪ್ರಯಾಣ ಬೆಳೆಸುವರು ಎಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿವಾಳ ಮಾಚಿದೇವ ಜಯಂತಿ ಸಿದ್ಧತೆಯ ಪೂರ್ವಭಾವಿ ಸಭೆ
