ರಾಯಚೂರು ಜನವರಿ 22 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಜನವರಿ 26ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 26ರ ಬೆಳಿಗ್ಗೆ 6.10ಕ್ಕೆ ಕಲಬುರಗಿ ನಗರದಿಂದ ನಿರ್ಗಮಿಸಿ ರಾಯಚೂರು ನಗರಕ್ಕೆ ಆಗಮಿಸಿ ಬೆಳಿಗ್ಗೆ 9 ಗಂಟೆಗೆ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡುವರು. ಬಳಿಕ ಬೆಳಿಗ್ಗೆ 10 ಗಂಟೆಗೆ ರಾಯಚೂರಿನಿಂದ ಹೊರಟು ಬೆಳಿಗ್ಗೆ 11ಕ್ಕೆ ದೇವದುರ್ಗ ತಾಲೂಕಿನ ಗಬ್ಬೂರಿನ ಶ್ರೀಬೂದಿಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 1.45ಕ್ಕೆ ದೇವದುರ್ಗ ತಾಲೂಕು ಆಸ್ಪತ್ರೆಗೆ ಬಳಿಕ 3 ಗಂಟೆಗೆ ದೇವದುರ್ಗ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 4.30ಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು.
ಸಂಜೆ 5.30ಕ್ಕೆ ದೇವದುರ್ಗದಿಂದ ನಿರ್ಗಮಿಸಿ ರಾಯಚೂರಿಗೆ ಆಗಮಿಸಿ ರಾತ್ರಿ 11.10ಕ್ಕೆ ರಾಯಚೂರಿನಿಂದ ರೈಲು ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *