ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ವಿಕಲಚೇತನರ ಆರ್.ಪಿ.ಡಿ ಟಾಸ್ಕ್ ಪೋರ್ಸ್ ತಾಲೂಕು ಸಮಿತಿ ವತಿಯಿಂದ ತಹಶೀಲ್ದಾರ್ ರವರಿಗೆ ಉಪತಹಶೀಲ್ದಾರ್ ವಿನಾಯಕ ರಾವ್ ಮೂಲಕ ಮನವಿ ಸಲ್ಲಿಸಿ ಜಿಲ್ಲಾಧ್ಯಕ್ಷರಾದ ಎಂ.ಡಿ. ಜಾಫರ್ ಮಾತನಾಡಿ ತಾಲೂಕಿನಲ್ಲಿನ ವಿಕಲಚೇತನರು ಹಾಗೂ ಅವರ ಪೋಷಕರ ಸಮಸ್ಯೆಗಳು ಹಾಗೂ ವಿಕಲಚೇತನರ ಶೈಕ್ಷಣಿಕ, ಆರ್ಥಿಕ, ಆರೋಗ್ಯ, ಸಾಮಾಜಿಕ ಭದ್ರತೆ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಹಾಗೂ ಸರ್ಕಾರದ ಯೋಜನೆಗಳನ್ನು ಹಾಗೂ ಸೌಲಭ್ಯಗಳನ್ನು ವಿಕಲಚೇತನರು ಪಡೆಯುವುದಕ್ಕೆ ಸಾಧ್ಯವಾಗದೆ ಇರುವ ಕುರಿತು ವಿಕಲಚೇತನರ ಹಕ್ಕುಗಳು ಬಗ್ಗೆ ತಿಳಿದುಕೊಂಡು ಅವುಗಳ ಪರಿಹಾರಕ್ಕಾಗಿ ಶೀಘ್ರದಲ್ಲಿ ತಾಲೂಕ ಮಟ್ಟದ ವಿಕಲಚೇತನರ ಕುಂದು ಕೊರತೆಗಳ ಸಭೆಯನ್ನು ಹಮ್ಮಿಕೊಳ್ಳಬೇಕೆಂದು ಒತ್ತಾಯಿಸಿದರು
ತಾಲೂಕ ಅಧ್ಯಕ್ಷರಾದ ಹನುಮೇಶ್ ಕಾತರಕಿ, ತಾಲೂಕ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಸದಸ್ಯರಾದ
ಸತ್ತಪ್ಪಯ್ಯ ,ದೊಡ್ಡ ನರಸಪ್ಪ, ನರಸಪ್ಪ ಕಾತರಕಿ ,ವೀರೇಶ್ ಸೇರಿದಂತೆ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *