ಮೈಸೂರಿನ ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯದ ಹಿರಿಯ ವಿದ್ಯಾರ್ಥಿಗಳ ಸಂಘ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಇಂದು ಆಯೋಜಿಸಿದ್ದ ಸಂಘದ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಮಾನ್ಯ ಸಮಾಜಕಲ್ಯಾಣ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರೊಂದಿಗೆ ಪಾಲ್ಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಶ್ರೀ ದೇವರಾಜ ಅರಸು ಮತ್ತು ಎಲ್. ಜಿ ಹಾವನೂರು ಪ್ರಶಸ್ತಿಗಳನ್ನು ವಿತರಿಸಲಾಯಿತು.
ಸಮಾರಂಭದಲ್ಲಿ, ಬಿಸಿಎಂ ವಿದ್ಯಾರ್ಥಿನಿಲಯದ ಹಿರಿಯ ವಿದ್ಯಾರ್ಥಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

