ಸಿಂಧನೂರು ಫೆಬ್ರವರಿ 12 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ. ಸಂತ ಅಂತೋನಿಯಾರ ಹಿರಿಯ ಪ್ರಾಥಮಿಕ ಶಾಲೆ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಕುಷ್ಟರೋಗ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು

ಡಾಕ್ಟರ ಪ್ರೀತಾ ಪಾಟೀಲ ಅವರು ಮಾತನಾಡಿ ಕುಷ್ಟರೋಗ ಶಾಪವಲ್ಲ ಪಾಪುವಲ್ಲ ಯಾವುದೇ ಮೂಡನಂಬಿಕೆಗೆ ಬಲಿಯಾಗದೆ ಸರಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಿ ಎಂದರು,

ನಂತರ ಮಾತನಾಡಿದ ಈಶ್ವರ ದಾಸಪ್ಪನವರು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಅವರು ಮಾತನಾಡಿ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ದಿನದಂದ್ದು ಅವರನ್ನು ಸ್ಮರಿಸುತ್ತಾ, ಅವರು ಕಂಡಿದ್ದ ಕುಷ್ಟರೋಗ ಮುಕ್ತ ಭಾರತವನ್ನು ಮಾಡಲು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಕುಷ್ಠರೋಗ ಚರ್ಮ ಮತ್ತು ನರಗಳಿಗೆ ಬರುವಂತಹ ಕಾಯಿಲೆ ಪ್ರಾರಂಭ ಹಂತದಲ್ಲಿ ಕಂಡುಹಿಡಿದು ಬೇಗನೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಆರೋಗ್ಯವಾಗಿರಬಹುದಾಗಿದೆ. ಕುಷ್ಟರೋಗದ ಲಕ್ಷಣಗಳಾದ ತಿಳಿ ಬಳಿ ತಾಮ್ರ ಬಣ್ಣದ ಸ್ಪರ್ಶಜ್ಞಾನ ಇಲ್ಲದ ಮಚ್ಚೆಗಳು ಮಚ್ಚೆಯ ಮೇಲೆ ಕೂದಲು ಇಲ್ಲದಿರುವುದು ಮತ್ತು ಸ್ಪರ್ಶವನ್ನು ಕಳೆದುಕೊಂಡಿರುವುದು ಹಾಗೂ ನರಗಳಲ್ಲಿ ಜೂಮ್ ಹಿಡಿಯುವುದು ಕುಷ್ಟರೋಗದ ಲಕ್ಷಣವಾಗಿರುತ್ತದೆ ಇಂಥ ಲಕ್ಷಣಗಳು ಕಂಡು ಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಂಡು ರೋಗ ಖಚಿತಪಟ್ಟರೆ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತದೆ. ಯಾವುದೇ ಭಯಭೀತರಾಗದೆ ಕಳಂಕಕ್ಕೆ ಒಳಗಾಗದೆ ಸೂಕ್ತವಾದ ಚಿಕಿತ್ಸೆಯನ್ನು ಪಡೆದುಕೊಂಡು ಆರೋಗ್ಯವಂತರಾಗಿರಬೇಕು ಎಂದು ಕುಷ್ಠರೋಗ ನಿರ್ಮೂಲನಾ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಸಂತ ಅಂತೋನಿಯಾರ ಹಿರಿಯ ಪ್ರಾಥಮಿಕ ಶಾಲೆ ಜವಳಗೇರಾದ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಮೇರಿ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಬಸ್ಸಯ್ಯ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಹೇಶ. ಅಂಬಮ್ಮ ಹಾಗೂ, ಶಿಕ್ಷಕರಾದ ಮೀನಾ . ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *