ತಾಳಿಕೋಟಿ: ಪಟ್ಟಣದ ಶ್ರೀ ರಾಘವೇಂದ್ರ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ(ರಿ) ಇದರ ಅಡಿಯಲ್ಲಿ ನಡೆಯುತ್ತಿರುವ ವಿ.ಕೆ.ಎಚ್. ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಖಾಸ್ಗತೇಶ್ವರ ಮಠದ ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು. ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಸಂಸ್ಥೆಯ ಅಧ್ಯಕ್ಷ ಪ್ರಲ್ಹಾದ ವಿ.ಹಜೇರಿ, ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ದಮ್ಮೂರ ಮಠ,ಸಿಆರ್.ಸಿ.ರಾಜು ವಿಜಾಪುರ, ನಿರ್ದೇಶಕ ಸಲಾವುದ್ದೀನ ಇರ್ಫಾನ ಖಾಜಿ ಮತ್ತಿತರರು ಇದ್ದರು.

