ಮಾನವ ಬಾಹ್ಯಾಕಾಶ ಯಾನ ಆ್ಯಕ್ಸಿಯಂ ಸ್ಪೇಸ್-4 ಅನ್ನು ಯಶಸ್ವಿಯಾಗಿ ಪೂರೈಸಿ, ದೇಶದ ಹಿರಿಮೆಯನ್ನು ಹೆಚ್ಚಿಸಿದ ನಮ್ಮೆಲ್ಲರ ಹೆಮ್ಮೆಯ ಗಗನಯಾತ್ರಿ ಶ್ರೀ ಶುಭಾಂಶು ಶುಕ್ಲಾ ಅವರನ್ನು ಇಂದು, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರೊಂದಿಗೆ, ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ, ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಮಧುಬಂಗಾರಪ್ಪ, ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

