ರಾಯಚೂರು ಫೆಬ್ರವರಿ 26 (ಕರ್ನಾಟಕ ವಾರ್ತೆ): ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಬಿಳಿಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಖರೀದಿ ಸಮಯದಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತ್ತೀಚೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜೋಳ ಖರೀದಿ ಕುರಿತು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಸರ್ಕಾರದ ನಿರ್ದೇಶನ ಮತ್ತು ಜಿಲ್ಲಾಡಳಿತದಿಂದ ನಿಗಧಿಪಡಿಸಲಾಗಿರುವ ಮಾನದಂಡಗಳನ್ವಯ ಈಗಾಗಲೇ ನೋಂದಣಿಯಾಗಿರುವ ಅಥವಾ ನೋಂದಣಿಯಾಗುವ ರೈತರಿಂದ ಬಿಳಿಜೋಳವನ್ನು ರೈತರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲೆಯಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ವತಿಯಿಂದ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕೆಂದು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿಗೆ ಅವಶ್ಯವಿರುವ ಗೋಣಿ ಚೀಲಗಳ ಸಿದ್ದತೆಯನ್ನು ಮಾಡಿಕೊಳ್ಳಬೇಕು. ಖರೀದಿ ಕೇಂದ್ರದಲ್ಲಿ ಬಳಸುವ ಡಿಜಿಟಲ್ ತೂಕ ಮಾಪನ ಯಂತ್ರಗಳನ್ನು ಕಡ್ಡಾಯವಾಗಿ ಕಾನೂನು ಮಾಪಸಶಾಸ್ತç ಇಲಾಖೆಯಿಂದ ಸ್ಟಾಂಪಿಂಗ್ ಮಾಡಿಸಿಕೊಳ್ಳುವಂತೆ ಖರೀದಿ ಕೇಂದ್ರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಆಯಾ ಖರೀದಿ ಕೇಂದ್ರ ವ್ಯಾಪ್ತಿಯ ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕರುಗಳಿಗೆ ಸಂಬಂಧಪಟ್ಟ ಖರೀದಿ ಕೇಂದ್ರದಲ್ಲಿ ಬಳಸುತ್ತಿರುವ ಡಿಜಿಟಲ್ ತೂಕ ಮಾಪನ ಯಂತ್ರಗಳನ್ನು ಸ್ಟಾö್ಯಟಿಂಗ್ ಮಾಡಿಸಿರುವ ಬಗ್ಗೆ ಪರಿಶೀಲಿಸುವಂತೆ ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ಹಿಂದಿನ ಸಾಲಿನಲ್ಲಿ ಸಮಯಕ್ಕೆ ಸರಿಯಾಗಿ ಲಾರಿಗಳು ಖರೀದಿ ಕೇಂದ್ರಗಳಿಗೆ ಬಾರದೇ ಇರುವುದರಿಂದ ಖರೀದಿ ಪ್ರಕ್ರಿಯೆಯು ಮಂದಗತಿಯಲ್ಲಿ ಸಾಗಿದ್ದು, ಈ ಸಾಲಿನಲ್ಲಿ ಆ ರೀತಿ ಆಗದಂತೆ ನೋಡಿಕೊಳ್ಳಬೇಕು. ಕಾರ್ಯಾದೇಶದಲ್ಲಿ ನೀಡಲಾಗಿರುವ 133 ಲಾರಿಗಳಿಗೆ ಜಿಪಿಎಸ್ ಅಳವಡಿಸಿಕೊಂಡು ಈ ಸಾಲಿನಲ್ಲಿ ನಿಯಮಾನುಸಾರ ಅಗತ್ಯಕ್ಕೆ ತಕ್ಕಂತೆ ಲಾರಿಗಳ ವ್ಯವಸ್ಥೆಯನ್ನು ಮಾಡಿಕೊಂಡು ಎಲ್ಲಾ ಖರೀದಿ ಕೇಂದ್ರಗಳಿಗೆ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಈ ವೇಳೆ ಕೆಎಫ್‌ಸಿಎಸ್‌ಸಿ ಜಿಲ್ಲಾ ವ್ಯವಸ್ಥಾಪಕರಾದ ಪ್ರಕಾಶ್ ಅವರು ಮಾತನಾಡಿ, ಎಫ್‌ಸಿಐ ತನಿಖಾ ತಂಡವು ನೀಡಿರುವ ವರದಿಯಾನುಸಾರ ಹಿಂದಿನ ಸಾಲಿನಲ್ಲಿ ಹಂಚಿಕೆಯಾಗಿ ಬಳಕೆಗೆ ಯೋಗ್ಯವಿರುವ 5,53,545 ಗೋಣಿ ಚೀಲಗಳು ವಿವಿಧ ಖರೀದಿ ಕೇಂದ್ರಗಳಲ್ಲಿ ಲಭ್ಯವಿರುವುದಾಗಿ ಮತ್ತು 2.50 ಲಕ್ಷ ನೂತನ ಗೋಣಿ ಚೀಲಗಳು ಜಿಲ್ಲೆಗೆ ಹಂಚಿಕೆಯಾಗಿದ್ದು, ಅತೀ ಶಿಘ್ರದಲ್ಲಿಯೇ ಕೇಂದ್ರಗಳಿಗೆ ತಲುಪಿಸುದಾಗಿ ಸಭೆಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ಲಿಂಗಸುಗೂರು ಸಹಾಯಕ ಆಯುಕ್ತರಾದ ಬಸವಣೆಪ್ಪ ಕಲಶೆಟ್ಟಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ನಜೀರ್ ಅಮಹದ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರಕಾಶ್ ಚೌವಾಣ್, ಸಹಕಾರ ಸಂಘಗಳ ಉಪ ನಿಬಂಧಕರು, ಜಿಲ್ಲೆಯ ದೇವದುರ್ಗ, ಲಿಂಗಸುಗೂರು, ಮಾನವಿ, ರಾಯಚೂರು, ಸಿಂಧನೂರು, ಮಸ್ಕಿ, ಸಿರವಾರ ತಾಲೂಕಿನ ತಹಶೀಲ್ದಾರರು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕರು ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *