ಸೋಮಲಾಪುರದಲ್ಲಿ 40 ವರ್ಷಗಳಿಂದ 80 ಬಡ ಕುಟುಂಬಗಳು ವಾಸ ಪ್ರಭಾವಿ ವ್ಯಕ್ತಿಗಳಿಂದ ಜೀವ ಬೆದರಿಕೆ, ಬಡವರನ್ನ ಒಕ್ಕಲೆಬ್ಬಿಸುವ ಕುತಂತ್ರ!

ಸಿಂಧನೂರು ತಾಲೂಕಿನ ಸಾಲಗುಂದ ಹೋಬಳಿಯ ಸೋಮಲಾಪುರ ಗ್ರಾಮದಲ್ಲಿ ಸರ್ವೆ ನಂ-197|1 ಮತ್ತು 198|2 ರಲ್ಲಿ ಈಗಾಗಲೇ ಸುಮಾರು 40 ವರ್ಷಗಳಿಂದ ವಾಸ ಮಾಡುತ್ತಿರುವ ಎಲ್ಲಾ ಸಮುದಾಯದ 80ಕ್ಕೂ ಹೆಚ್ಚು ಬಡ ಕುಟುಂಬಗಳನ್ನು ಒಕ್ಕಲೆಬ್ಬಿಸುವಂತಹ ತಂತ್ರಗಾರಿಕೆ ನಡೆಯುತ್ತಿದೆ ಎಂದು ಸೋಮಲಾಪುರ ನಿವಾಸಿಗರು ಆರೋಪ…

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎನ್ ಎಸ್ ಎಸ್ ಶಿಭಿರಾರ್ಥಿಗಳು ಪಾತ್ರ ಮಹತ್ತರವಾದದ್ದು— ತಹಸಿಲ್ದಾರ್ ಅರುಣಕುಮಾರ ದೇಸಾಯಿ

ಸಿಂಧನೂರು ತಾಲೂಕಿನ ಅಂಬಾಮಠದಲ್ಲಿ ನಡೆದ ನೊಬಲ್ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಧ್ವಜಾರೋಹಣ ಮಾತನಾಡಿದ ಅವರು ಶ್ರಮವಿಲ್ಲದ ಎಲ್ಲವೂ ಸಿಗಬೇಕು ಎನ್ನುವಂತಹ ಕಾಲದಲ್ಲಿ ನಾವಿದ್ದೀವಿ. ಆದರೆ ಅದಕ್ಕೆ ಸಿಗುವಂತಹ ಫಲ ಕ್ಷಣಿಕವಾದದ್ದು, ಅದರಿಂದ ಈ…

ಕಲಾಕೃತಿಯಲ್ಲಿ ಮಣ್ಣಿನ ಮಡಿಕೆಗಳನ್ನು ಅಲಂಕಾರಗೊಳಿಸಿ ಕಾಳು ಮತ್ತು ನೀರು ಹಾಕಿ ಗಿಡಮರಗಳಿಗೆ ಕಟ್ಟಿ ಪ್ರಾಣಿ ಪಕ್ಷಿಗಳಿಗೆ ಮಾನವೀಯತೆ ತೋರುತ್ತಿರುವ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ…. ರಾಜ್ಯ ಪ್ರಶಸ್ತಿ ಪುರಸ್ಕೃತ ವನಸಿರಿ ಅಮರೇಗೌಡ ಮಲ್ಲಾಪುರ ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿಗಳೇ ಮಡಿಕೆಗಳಿಗೆ ಕಲಾಕೃತಿಗಳನ್ನು ಬಿಡಿಸುವ ಮೂಲಕ ಅಲಂಕಾರಗೊಳಿಸಿ ಶಾಲೆಯಲ್ಲಿರುವ ಎಲ್ಲಾ ಗಿಡಗಳಿಗೆ ಮಡಿಕೆಗಳನ್ನು ಕಟ್ಟಿ ಕಾಳು ಮತ್ತು ನೀರು ಹಾಕಿ ಪ್ರಾಣಿ ಪಕ್ಷಿಗಳಿಗೆ ಬಿಸಿಲು ಮತ್ತು ನೀರಿನ ದಾಹ ತೀರಿಸಲು ಮುಂದಾಗಿರುವುದು ಎಲ್ಲ ಪರಿಸರ ಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾದರು. ಇದೇ ಸಂಧರ್ಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಪೌಂಡೇಷನ್ ರಾಜ್ಯಾಧ್ಯಕ್ಷ ಅಮರೇಗೌಡ ಮಲ್ಲಾಪುರ ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಮಲ್ಲಾಪುರ ಶಾಲೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಕೈಗೊಳ್ಳಲಾಗಿದೆ. ಇಲ್ಲಿನ ಶಾಲೆಯ ಶಿಕ್ಷಕರು,ವಿದ್ಯಾರ್ಥಿಗಳು ಬೇಸಿಗೆ ಕಾಲ ಆರಂಭವಾಗಿರುವುದರಿಂದ ಪ್ರಾಣಿ ಪಕ್ಷಿಗಳ ಸಂತತಿ ಉಳುವಿಗಾಗಿ ಸ್ವತಃ ತಾವೇ ಮಣ್ಣಿನ ಮಡಿಕೆಗಳಿಗೆ ಕಲಾಕೃತಿ ಮೂಲಕ ಅಲಂಕಾರಗೊಳಿಸಿ ಗಿಡಮರಗಳಿಗೆ ಕಟ್ಟಿ ಕಾಳು ಮತ್ತು ನೀರು ಹಾಕಿ ಮಾನವೀಯತೆ ತೋರುತ್ತಿರುವ ಕಾರ್ಯ ಶ್ಲಾಘನೀಯ.ಇದೇ ರೀತಿ ಪ್ರತಿಯೊಬ್ಬರೂ ತಮ್ಮ ಶಾಲೆ,ಮನೆ ಮಹಡಿಗಳ ಮೇಲೆ ಹಾಗೂ ಸುತ್ತಮುತ್ತ ಇರುವ ಗಿಡಗಳ ರಂಬೆ ಕೊಂಬೆಗಳಿಗೆ ಮಣ್ಣಿನ ಮಡಿಕೆಗಳನ್ನು ಕಟ್ಟಿ ಕಾಳು ನೀರು ಹಾಕಿ ಪ್ರಾಣಿ ಪಕ್ಷಿಗಳ ಸಂಕುಲ ಉಳಿಸಲು ಮುಂದಾಗಬೇಕು ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ಷಣ್ಮುಖಗೌಡ CRP ಸಮೂಹ ಸಂಪನ್ಮೂಲ ಕೇಂದ್ರ ಪಗಡದಿನ್ನಿ,ಸಂಗಪ್ಪ ಮುಖ್ಯ ಗುರುಗಳು,ಶಿಕ್ಷಕರಾದ ಅಮರೇಶ, ವನಸಿರಿ ಪೌಂಡೇಷನ್ ರಾಜ್ಯ ಸಾಮಾಜಿಕ ಜಾಲತಾಣ ಅಧ್ಯಕ್ಷ ಚನ್ನಪ್ಪ ಕೆ.ಹೊಸಹಳ್ಳಿ,ಶ್ರೀಮತಿ ಅನುಸೂಯ ಶ್ರೀಮತಿ ಅಂಬಮ್ಮ ಶ್ರೀಮತಿ ಸುಗಮ್ಮ ಹಾಗೂ ವಿದ್ಯಾರ್ಥಿಗಳು ಇದ್ದರು .

ಕಲಾಕೃತಿಯಲ್ಲಿ ಮಣ್ಣಿನ ಮಡಿಕೆಗಳನ್ನು ಅಲಂಕಾರಗೊಳಿಸಿ ಕಾಳು ಮತ್ತು ನೀರು ಹಾಕಿ ಗಿಡಮರಗಳಿಗೆ ಕಟ್ಟಿ ಪ್ರಾಣಿ ಪಕ್ಷಿಗಳಿಗೆ ಮಾನವೀಯತೆ ತೋರುತ್ತಿರುವ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ…. ರಾಜ್ಯ ಪ್ರಶಸ್ತಿ ಪುರಸ್ಕೃತ ವನಸಿರಿ ಅಮರೇಗೌಡ ಮಲ್ಲಾಪುರ ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದ ಉನ್ನತಿಕರಿಸಿದ ಸರಕಾರಿ ಹಿರಿಯ…

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸಿಂಧನೂರು : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸುವಂತೆ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ’ ಫೆ. 24ರಂದು ಧಾರವಾಡದಲ್ಲಿ ನಡೆಸಿದ ಬೃಹತ್ ಪ್ರತಿಭಟನೆ. ಯುವಜನರ ಉದ್ಯೋಗದ ನಿರೀಕ್ಷೆಗಳಿಗೆ ಸ್ಪಂದಿಸದಿರುವ ರಾಜ್ಯ ಸರ್ಕಾರದ ವೈಫಲ್ಯಕ್ಕೆ…

ಜಾಲಹಳ್ಳಿಯಲ್ಲಿ ರೈತರ ಪರದಾಟ – ಸರ್ವರ್ ಸಮಸ್ಯೆಯಿಂದ FID-EKYC ಸ್ಥಗಿತ, ಬಿಸಿಲಿನಲ್ಲಿ ರೈತರ ಆಕ್ರೋಶ

ಜಾಲಹಳ್ಳಿ : ಫೆ 27ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ FID-EKYC ಕಾರ್ಯಕ್ಕೆ ಭಾರಿ ಪ್ರಮಾಣದಲ್ಲಿ ರೈತರು ಜಮಾಯಿಸಿದರು. ಆದರೆ ಸರ್ವರ್ ಸಮಸ್ಯೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ ಹಿನ್ನೆಲೆಯಲ್ಲಿ ರೈತರು ಬಿಸಿಲಿನಲ್ಲಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಕೇಂದ್ರ ಸರ್ಕಾರದ ಯೋಜನೆಗಳಿಗೆ ಅಗತ್ಯವಿರುವ…

ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ವಿಶೇಷ ಉಪನ್ಯಾಸ

ಪ್ರತಿಯೊಬ್ಬರ ದಿನ ನಿತ್ಯದ ಜೀವನದಲ್ಲಿ ಹಣಕಾಸು ವ್ಯವಹಾರ ಸಾಮಾನ್ಯವಾಗಿದೆ. ಮನುಷ್ಯನ ಬೇಡಿಕೆಗಳನ್ನು ಪೂರೈಸಿಕೊಳ್ಳಲು ಅವಶ್ಯವಾಗಿ ಎಲ್ಲರಿಗೂ ಹಣ ಬೇಕು. ಹಣ ಗಳಿಸುವುದರ ಜತೆಗೆ ಉಳಿಸಿಕೊಂಡರೆ ಜೀವನದಲ್ಲಿ ಆರ್ಥಿಕವಾಗಿ ಪ್ರಗತಿ ಹೊಂದಲು ಸಾಧ್ಯ’ ಎಂದು ತುರ್ವಿಹಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ…